<p><strong>ಬೆಂಗಳೂರು: </strong>ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕ ಲೋಕಾಯುಕ್ತದ ಎರಡನೇ ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.</p>.<p>ಫಣೀಂದ್ರ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾರ್ಚ್ 22ರಂದು ಆದೇಶ ಹೊರಡಿಸಿದ್ದಾರೆ. 2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು.</p>.<p>ಮತ್ತೊಂದು ಉಪ ಲೋಕಾಯುಕ್ತ ಹುದ್ದೆಯಲ್ಲಿ ಸದ್ಯ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 28ರಂದು ಅಧಿಕಾರ ಪೂರ್ಣಗೊಳಿಸಿದ್ದು, ಎರಡು ತಿಂಗಳಿಂದಲೂ ಲೋಕಾಯುಕ್ತ ಹುದ್ದೆ ಖಾಲಿ ಇದೆ.</p>.<p>1958ರ ಮೇ 20ರಂದು ಜನಿಸಿದ ಫಣೀಂದ್ರ ಅವರು 1985ರಲ್ಲಿ ತುಮಕೂರು ಜಿಲ್ಲೆಯಲ್ಲಿ ತಮ್ಮ ವಕೀಲ ವೃತ್ತಿ ಆರಂಭಿಸಿದರು. 1998ರಲ್ಲಿ ನೇರವಾಗಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿ, 2013ರ ಅಕ್ಟೋಬರ್ 24ರಂದು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕ ಲೋಕಾಯುಕ್ತದ ಎರಡನೇ ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.</p>.<p>ಫಣೀಂದ್ರ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾರ್ಚ್ 22ರಂದು ಆದೇಶ ಹೊರಡಿಸಿದ್ದಾರೆ. 2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು.</p>.<p>ಮತ್ತೊಂದು ಉಪ ಲೋಕಾಯುಕ್ತ ಹುದ್ದೆಯಲ್ಲಿ ಸದ್ಯ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 28ರಂದು ಅಧಿಕಾರ ಪೂರ್ಣಗೊಳಿಸಿದ್ದು, ಎರಡು ತಿಂಗಳಿಂದಲೂ ಲೋಕಾಯುಕ್ತ ಹುದ್ದೆ ಖಾಲಿ ಇದೆ.</p>.<p>1958ರ ಮೇ 20ರಂದು ಜನಿಸಿದ ಫಣೀಂದ್ರ ಅವರು 1985ರಲ್ಲಿ ತುಮಕೂರು ಜಿಲ್ಲೆಯಲ್ಲಿ ತಮ್ಮ ವಕೀಲ ವೃತ್ತಿ ಆರಂಭಿಸಿದರು. 1998ರಲ್ಲಿ ನೇರವಾಗಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿ, 2013ರ ಅಕ್ಟೋಬರ್ 24ರಂದು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>