<p><strong>ಬೆಂಗಳೂರು: </strong>ಹಣ ಅಕ್ರಮ ವರ್ಗಾವಣೆ ಆರೋಪದಡಿ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ವಿ.ರಾಮಯ್ಯ ಮತ್ತು ಅವರ ಪತ್ನಿ ಎಂ.ಲಲಿತಾ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.</p>.<p>ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಕೋಲಾರ ಲೋಕಾಯುಕ್ತ ಪೊಲೀಸರು 2009ರಲ್ಲಿ ದಾಖಲಿಸಿದ್ದ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು.</p>.<p>ಪ್ರಕರಣದ ವಿಚಾರಣೆ ನಡೆಸಿದ ನಗರದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್.ಎ.ಮೋಹನ್ ಶುಕ್ರವಾರ (ಜು.29) ಈ ಕುರಿತಂತೆ ಆದೇಶಿಸಿದ್ದಾರೆ.</p>.<p>‘ರಾಮಯ್ಯ ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ತಮ್ಮ ನಿಗದಿತ ಆದಾಯಕ್ಕಿಂತಲೂ ಶೇ 415.3 ರಷ್ಟು ಹೆಚ್ಚಿನ ಪ್ರಮಾಣದ ಅಂದರೆ, ₹ 1.24 ಕೋಟಿ ಮೊತ್ತದ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ’ ಎಂಬ ಕಾರಣಕ್ಕೆ ಈ ದೂರು ದಾಖಲಾಗಿತ್ತು.</p>.<p>ತನಿಖೆ ವೇಳೆ ಜಾರಿ ನಿರ್ದೇಶನಾಲಯ ₹ 70 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವತ್ತನ್ನು ಪತ್ತೆಹಚ್ಚಿ 2018ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಣ ಅಕ್ರಮ ವರ್ಗಾವಣೆ ಆರೋಪದಡಿ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ವಿ.ರಾಮಯ್ಯ ಮತ್ತು ಅವರ ಪತ್ನಿ ಎಂ.ಲಲಿತಾ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.</p>.<p>ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಕೋಲಾರ ಲೋಕಾಯುಕ್ತ ಪೊಲೀಸರು 2009ರಲ್ಲಿ ದಾಖಲಿಸಿದ್ದ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು.</p>.<p>ಪ್ರಕರಣದ ವಿಚಾರಣೆ ನಡೆಸಿದ ನಗರದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್.ಎ.ಮೋಹನ್ ಶುಕ್ರವಾರ (ಜು.29) ಈ ಕುರಿತಂತೆ ಆದೇಶಿಸಿದ್ದಾರೆ.</p>.<p>‘ರಾಮಯ್ಯ ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ತಮ್ಮ ನಿಗದಿತ ಆದಾಯಕ್ಕಿಂತಲೂ ಶೇ 415.3 ರಷ್ಟು ಹೆಚ್ಚಿನ ಪ್ರಮಾಣದ ಅಂದರೆ, ₹ 1.24 ಕೋಟಿ ಮೊತ್ತದ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ’ ಎಂಬ ಕಾರಣಕ್ಕೆ ಈ ದೂರು ದಾಖಲಾಗಿತ್ತು.</p>.<p>ತನಿಖೆ ವೇಳೆ ಜಾರಿ ನಿರ್ದೇಶನಾಲಯ ₹ 70 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವತ್ತನ್ನು ಪತ್ತೆಹಚ್ಚಿ 2018ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>