<p>ರಾಯಚೂರು: ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡದೆ ನಿರ್ಲಕ್ಷಿಸಿದ ಆರೋಪದ ಮೇಲೆ ನಿವೃತ್ತ ಪಿಎಸ್ಐ ಚಂದ್ರಕಾಂತ ಎಚ್.ಜಂಗಮ್ ಎಂಬುವವರಿಗೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು 15 ದಿನ ಕಾಲಾವಕಾಶ ನೀಡಿದೆ. ಈ ಅವಧಿ ಮುಗಿಯುವವರೆಗೆ ಕಕ್ಷಿದಾರನನ್ನು (ಮಾರ್ಚ್ 9ರವರೆಗೆ) ಜೈಲಿನಲ್ಲೇ ಇರಿಸಿ, ಮತ್ತೆ ಕೋರ್ಟ್ಗೆ ಹಾಜರುಪಡಿಸುವಂತೆ ಜಿಲ್ಲಾ ಕಾರಾಗೃಹದ ಅಧೀಕ್ಷಕರಿಗೆ ನ್ಯಾಯಾಧೀಶ ಜಗದೀಶ್ವರ ಅವರು ಮಂಗಳವಾರ ಆದೇಶ ನೀಡಿದರು.</p>.<p>ಮಹಾರಾಷ್ಟ್ರದ ಸೊಲ್ಲಾಪುರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಜಂಗಮ್ ಮತ್ತು ಪತ್ನಿ ಲೀಲಾವತಿ (ರಾಯಚೂರಿನವರು) ಅವರದ್ದು 2018ರಲ್ಲಿ ವಿಚ್ಛೇದನವಾಗಿತ್ತು. ಕೋರ್ಟ್ ಆದೇಶದಂತೆ ಪ್ರತಿ ತಿಂಗಳು ₹19,500 ಜೀವನಾಂಶ ನೀಡಲು ಚಂದ್ರಕಾಂತ ಒಪ್ಪಿದ್ದರು. ಆದರೆ, ಈಚೆಗೆ ಜೀವನಾಂಶ ಕೊಡದೆ ನಿರ್ಲಕ್ಷಿಸಿದ್ದಕ್ಕೆ ಲೀಲಾವತಿ ಅವರು ಕೋರ್ಟ್ ಮೊರೆ ಹೋಗಿದ್ದಾರೆ.</p>.<p>ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ಚಂದ್ರಕಾಂತ ಅವರು ಜೀವನಾಂಶ ನೀಡಲು ಒಪ್ಪದ ಕಾರಣ ಜೈಲು ಶಿಕ್ಷೆಗೆ ಗುರಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡದೆ ನಿರ್ಲಕ್ಷಿಸಿದ ಆರೋಪದ ಮೇಲೆ ನಿವೃತ್ತ ಪಿಎಸ್ಐ ಚಂದ್ರಕಾಂತ ಎಚ್.ಜಂಗಮ್ ಎಂಬುವವರಿಗೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು 15 ದಿನ ಕಾಲಾವಕಾಶ ನೀಡಿದೆ. ಈ ಅವಧಿ ಮುಗಿಯುವವರೆಗೆ ಕಕ್ಷಿದಾರನನ್ನು (ಮಾರ್ಚ್ 9ರವರೆಗೆ) ಜೈಲಿನಲ್ಲೇ ಇರಿಸಿ, ಮತ್ತೆ ಕೋರ್ಟ್ಗೆ ಹಾಜರುಪಡಿಸುವಂತೆ ಜಿಲ್ಲಾ ಕಾರಾಗೃಹದ ಅಧೀಕ್ಷಕರಿಗೆ ನ್ಯಾಯಾಧೀಶ ಜಗದೀಶ್ವರ ಅವರು ಮಂಗಳವಾರ ಆದೇಶ ನೀಡಿದರು.</p>.<p>ಮಹಾರಾಷ್ಟ್ರದ ಸೊಲ್ಲಾಪುರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಜಂಗಮ್ ಮತ್ತು ಪತ್ನಿ ಲೀಲಾವತಿ (ರಾಯಚೂರಿನವರು) ಅವರದ್ದು 2018ರಲ್ಲಿ ವಿಚ್ಛೇದನವಾಗಿತ್ತು. ಕೋರ್ಟ್ ಆದೇಶದಂತೆ ಪ್ರತಿ ತಿಂಗಳು ₹19,500 ಜೀವನಾಂಶ ನೀಡಲು ಚಂದ್ರಕಾಂತ ಒಪ್ಪಿದ್ದರು. ಆದರೆ, ಈಚೆಗೆ ಜೀವನಾಂಶ ಕೊಡದೆ ನಿರ್ಲಕ್ಷಿಸಿದ್ದಕ್ಕೆ ಲೀಲಾವತಿ ಅವರು ಕೋರ್ಟ್ ಮೊರೆ ಹೋಗಿದ್ದಾರೆ.</p>.<p>ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ಚಂದ್ರಕಾಂತ ಅವರು ಜೀವನಾಂಶ ನೀಡಲು ಒಪ್ಪದ ಕಾರಣ ಜೈಲು ಶಿಕ್ಷೆಗೆ ಗುರಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>