ಆಗ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದ ಕುಮಾರಸ್ವಾಮಿ, ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿ ಗೆದ್ದಿದ್ದರು. ಅದೇ ರೀತಿ, ಹಾಸನ ಮತ್ತು ಹೊಳೆನರಸೀಪುರ ಕ್ಷೇತ್ರದಲ್ಲಿ ಎಚ್.ಡಿ.ರೇವಣ್ಣ ಅವರನ್ನೇ ಕಣಕ್ಕಿಳಿಸುವುದು, ಎರಡೂ ಕ್ಷೇತ್ರಗಳಲ್ಲಿ ಗೆದ್ದರೆ, ಹೊಳೆನರಸೀಪುರ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಭವಾನಿ ರೇವಣ್ಣ ಅವರನ್ನು ಅಲ್ಲಿಂದ ಕಣಕ್ಕೆ ಇಳಿಸಿ, ಗೆಲ್ಲಿಸಿಕೊಳ್ಳುವ ಲೆಕ್ಕಾಚಾರ ಪಕ್ಷದಲ್ಲಿದೆ.