ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ‘ಇ–ಆಡಳಿತ ಇಲಾಖೆಯಿಂದ ಪಹಣಿ, ಜಾತಿಮತ್ತು ಆದಾಯ ಪ್ರಮಾಣಪತ್ರವನ್ನು ಕುಟುಂಬವಾರು ಪಡೆದು ಮತ್ತು ಮೋಜಣಿ ತಂತ್ರಾಂಶದಿಂದ ಸರ್ವೆ ನಕ್ಷೆ (ಅಟ್ಲಾಸ್) ಮುದ್ರಿಸಿ, ಆ ದಾಖಲೆಗಳನ್ನು ಪ್ಲಾಸ್ಟಿಕ್ ಲಕೋಟೆಯಲ್ಲಿರಿಸಿ ಪ್ರತಿ ರೈತಕುಟುಂಬದ ಮನೆ ಬಾಗಿಲಿಗೆ ತಲುಪಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.