ಜುಲೈ 28ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ಸಭೆ ನಡೆಸಿದ್ದ ಬೊಮ್ಮಾಯಿ, ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ₹ 1,000ದಿಂದ ₹ 1,200ಕ್ಕೆ, ಅಂಗವಿಕಲರು ಮತ್ತು ವಿಧವೆಯರ ಮಾಸಾಶನವನ್ನು ₹ 600ರಿಂದ ₹ 800ಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದರು. ಮಾಸಾಶನ ಪರಿಷ್ಕರಿಸಿರುವ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆಗಸ್ಟ್ ತಿಂಗಳಿನಿಂದಲೇ ಪರಿಷ್ಕೃತ ಮಾಸಾಶನ ಫಲಾನುಭವಿಗಳಿಗೆ ಸಿಗಲಿದೆ.