ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಸಿ.ಎನ್.ಬಾಲಕೃಷ್ಣ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಂದಾಯ ಸಚಿವ ಆರ್.ಅಶೋಕ, ‘ಅಕ್ರಮ ಸಕ್ರಮದಡಿ 94 ಸಿ ಹಾಗೂ 94 ಸಿಸಿ ಅಡಿ ಸರ್ಕಾರಿ ಶಾಲೆ, ಸ್ಮಶಾನ, ಅಂಗನವಾಡಿ, ದೇವಸ್ಥಾನ, ಮಾಜಿ ಸೈನಿಕರಿಗೆ ಸಮುದಾಯ ಭವನ, ಕಸ ಸಂಸ್ಕರಣಾ ಘಟಕ ನಿರ್ಮಾಣ ಹಾಗೂ ಆಶ್ರಯ ಯೋಜನೆಯಡಿ ಸಾರ್ವಜನಿಕ ಉದ್ದೇಶಕ್ಕೆ ಮತ್ತು ಸಂಘ ಸಂಸ್ಥೆಗಳಿಗೆ ಜಾಗ ಮಂಜೂರು ಮಾಡಲಾಗಿದೆ. ಗುತ್ತಿಗೆ ಷರತ್ತು ಉಲ್ಲಂಘಿಸಿರುವ ಸಂಸ್ಥೆಗಳಿಗೆ ನೋಟಿಸ್ ನೀಡಿ ಮಂಜೂರಾತಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದೂ ಉತ್ತರಿಸಿದ್ದಾರೆ.