<p><strong>ಬೆಂಗಳೂರು</strong>: ‘2008ರಿಂದ ಇಲ್ಲಿಯವರೆಗೆ ನಡೆದ 17 ಕೊಲೆ ಹಾಗೂ ಅಪಹರಣ ಪ್ರಕರಣಗಳಲ್ಲಿ ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರು ಭಾಗಿಯಾದ ಬಗ್ಗೆ ಪುರಾವೆಗಳು ಇವೆ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈಸೂರಿನ ರಾಜು, ಮಡಿಕೇರಿಯ ಕುಟ್ಟಪ್ಪ, ಪ್ರವೀಣ್ ಪೂಜಾರಿ, ಪ್ರಶಾಂತ್ ಪೂಜಾರಿ, ಶಿವಾಜಿನಗರದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್, ಶರತ್ ಮಡಿವಾಳ ಕೊಲೆ ಪ್ರಕರಣಗಳಲ್ಲಿ ಈ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಹುಣಸೂರಿನ ಇಬ್ಬರು ಯುವಕರನ್ನು ಅಪಹರಿಸಿ ಕೊಲೆ ಮಾಡಿದ್ದರು’ ಎಂದರು.</p>.<p>‘ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ನಲ್ಲಿರುವ ಭಿನ್ನಾಭಿಪ್ರಾಯ ಹಾಗೂ ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಭಿನ್ನಾಭಿಪ್ರಾಯ ಕಾರಣ’ ಎಂದು ಅವರು ಹೇಳಿದರು.</p>.<p>‘ಈ ಗಲಭೆಯಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರ ಕೈವಾಡ ಇದೆ. ಪಾಲಿಕೆಯ ಮಾಜಿ ಮೇಯರ್ ಸಂಪತ್ರಾಜ್ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಸಿದ್ದರಾಮಯ್ಯ ಅವರ ಬಳಿ ಹೇಳಿದ್ದಾರೆ. ರಾಜಕೀಯ ಅಸ್ತಿತ್ವಕ್ಕಾಗಿ ಈ ಗಲಭೆ ನಡೆದಿದೆ’<br />ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘2008ರಿಂದ ಇಲ್ಲಿಯವರೆಗೆ ನಡೆದ 17 ಕೊಲೆ ಹಾಗೂ ಅಪಹರಣ ಪ್ರಕರಣಗಳಲ್ಲಿ ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರು ಭಾಗಿಯಾದ ಬಗ್ಗೆ ಪುರಾವೆಗಳು ಇವೆ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈಸೂರಿನ ರಾಜು, ಮಡಿಕೇರಿಯ ಕುಟ್ಟಪ್ಪ, ಪ್ರವೀಣ್ ಪೂಜಾರಿ, ಪ್ರಶಾಂತ್ ಪೂಜಾರಿ, ಶಿವಾಜಿನಗರದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್, ಶರತ್ ಮಡಿವಾಳ ಕೊಲೆ ಪ್ರಕರಣಗಳಲ್ಲಿ ಈ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಹುಣಸೂರಿನ ಇಬ್ಬರು ಯುವಕರನ್ನು ಅಪಹರಿಸಿ ಕೊಲೆ ಮಾಡಿದ್ದರು’ ಎಂದರು.</p>.<p>‘ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ನಲ್ಲಿರುವ ಭಿನ್ನಾಭಿಪ್ರಾಯ ಹಾಗೂ ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಭಿನ್ನಾಭಿಪ್ರಾಯ ಕಾರಣ’ ಎಂದು ಅವರು ಹೇಳಿದರು.</p>.<p>‘ಈ ಗಲಭೆಯಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರ ಕೈವಾಡ ಇದೆ. ಪಾಲಿಕೆಯ ಮಾಜಿ ಮೇಯರ್ ಸಂಪತ್ರಾಜ್ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಸಿದ್ದರಾಮಯ್ಯ ಅವರ ಬಳಿ ಹೇಳಿದ್ದಾರೆ. ರಾಜಕೀಯ ಅಸ್ತಿತ್ವಕ್ಕಾಗಿ ಈ ಗಲಭೆ ನಡೆದಿದೆ’<br />ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>