ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಜಿ.ಬಿ. ಪಾಟೀಲ್ ನಾಲ್ಕು ಬೇಡಿಕೆಗಳುಳ್ಳ ಹಕ್ಕೊತ್ತಾಯ ಮಂಡಿಸಿದರು. ವಿವಿಧ ಮಠಾಧೀಶರು, ಸಾಹಿತಿಗಳು, ಎಚ್.ಡಿ. ದೇವೇಗೌಡ, ಡಿ.ಕೆ. ಶಿವಕುಮಾರ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಈ ಹಕ್ಕೊತ್ತಾಯಕ್ಕೆ ಸಹಿ ಮಾಡಿದ್ದಾರೆ.