<p><strong>ಬೆಂಗಳೂರು</strong>: ಚುನಾವಣೆ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲೆಂದೇ ಕಾಂಗ್ರೆಸ್ ಪಕ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಜನರನ್ನು ಹೊರಗಿನಿಂದ ಆರ್.ಆರ್.ನಗರಕ್ಕೆ ಕರೆತಂದಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.</p>.<p>‘ನಕಲಿ ಗುರುತಿನ ಚೀಟಿಯನ್ನು ಸೃಷ್ಟಿಸಿ ಜನರಲ್ಲಿ ಗೊಂದಲ ಮೂಡಿಸುವ ಕಾರ್ಯಕ್ಕೂ ಕೈಹಾಕಿದ್ದಾರೆ. ಈ ಮೂಲಕ ನನ್ನ ಮೇಲೆ ಆರೋಪ ಹೊರಿಸಿ, ಕಾಂಗ್ರೆಸ್ನವರು ಅನುಕಂಪ ಗಿಟ್ಟಿಸಲು ಸಂಚು ನಡೆಸಿದ್ದಾರೆ’ ಎಂದು ಅವರು ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಪ್ರಜ್ಞಾವಂತರು, ಬುದ್ಧಿವಂತರು ಮತ್ತು ಸುಶಿಕ್ಷಿತರು ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ. ಅಕ್ರಮಗಳನ್ನು ನಡೆಸಿ ಅದನ್ನು ನಮ್ಮ ತಲೆಗೆಕಟ್ಟಿ ತಾವು ಒಳ್ಳೆಯವರು, ಬಿಜೆಪಿಯವರು ಕೆಟ್ಟವರು ಎಂದು ಬಿಂಬಿಸಿ ಅನುಕಂಪದ ಮತಗಳನ್ನು ಗಿಟ್ಟಿಸಲು ಕುತಂತ್ರ ಮಾಡಿದ್ದಾರೆ’ ಎಂದು ಹರಿಹಾಯ್ದರು.</p>.<p>ಕಂದಾಯ ಸಚಿವ ಆರ್.ಅಶೋಕ ಮಾತನಾಡಿ, ಕಾಂಗ್ರೆಸ್ ಮುಖಂಡರು ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಚುನಾವಣಾ ಗುರುತಿನ ಚೀಟಿಗಳ ಮಾಹಿತಿ ಮತ್ತು ಗುರುತಿನ ಚೀಟಿ ಸಂಖ್ಯೆಯನ್ನು ಸಂಗ್ರಹಿಸುತ್ತಿರುವುದು ಯಾವ ಕಾರಣಕ್ಕೆ? ಈ ರೀತಿ ವಿವರ ಸಂಗ್ರಹಿಸುವುದು ಅಪರಾಧ ಎಂದು ಚುನಾವಣಾ ಆಯೋಗ ಈಗಾಗಲೇ ತಿಳಿಸಿದೆ. ಮತದಾರರು ಯಾವುದೇ ಕಾರಣಕ್ಕೂ ಮಾಹಿತಿ ನೀಡಬಾರದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚುನಾವಣೆ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲೆಂದೇ ಕಾಂಗ್ರೆಸ್ ಪಕ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಜನರನ್ನು ಹೊರಗಿನಿಂದ ಆರ್.ಆರ್.ನಗರಕ್ಕೆ ಕರೆತಂದಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.</p>.<p>‘ನಕಲಿ ಗುರುತಿನ ಚೀಟಿಯನ್ನು ಸೃಷ್ಟಿಸಿ ಜನರಲ್ಲಿ ಗೊಂದಲ ಮೂಡಿಸುವ ಕಾರ್ಯಕ್ಕೂ ಕೈಹಾಕಿದ್ದಾರೆ. ಈ ಮೂಲಕ ನನ್ನ ಮೇಲೆ ಆರೋಪ ಹೊರಿಸಿ, ಕಾಂಗ್ರೆಸ್ನವರು ಅನುಕಂಪ ಗಿಟ್ಟಿಸಲು ಸಂಚು ನಡೆಸಿದ್ದಾರೆ’ ಎಂದು ಅವರು ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಪ್ರಜ್ಞಾವಂತರು, ಬುದ್ಧಿವಂತರು ಮತ್ತು ಸುಶಿಕ್ಷಿತರು ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ. ಅಕ್ರಮಗಳನ್ನು ನಡೆಸಿ ಅದನ್ನು ನಮ್ಮ ತಲೆಗೆಕಟ್ಟಿ ತಾವು ಒಳ್ಳೆಯವರು, ಬಿಜೆಪಿಯವರು ಕೆಟ್ಟವರು ಎಂದು ಬಿಂಬಿಸಿ ಅನುಕಂಪದ ಮತಗಳನ್ನು ಗಿಟ್ಟಿಸಲು ಕುತಂತ್ರ ಮಾಡಿದ್ದಾರೆ’ ಎಂದು ಹರಿಹಾಯ್ದರು.</p>.<p>ಕಂದಾಯ ಸಚಿವ ಆರ್.ಅಶೋಕ ಮಾತನಾಡಿ, ಕಾಂಗ್ರೆಸ್ ಮುಖಂಡರು ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಚುನಾವಣಾ ಗುರುತಿನ ಚೀಟಿಗಳ ಮಾಹಿತಿ ಮತ್ತು ಗುರುತಿನ ಚೀಟಿ ಸಂಖ್ಯೆಯನ್ನು ಸಂಗ್ರಹಿಸುತ್ತಿರುವುದು ಯಾವ ಕಾರಣಕ್ಕೆ? ಈ ರೀತಿ ವಿವರ ಸಂಗ್ರಹಿಸುವುದು ಅಪರಾಧ ಎಂದು ಚುನಾವಣಾ ಆಯೋಗ ಈಗಾಗಲೇ ತಿಳಿಸಿದೆ. ಮತದಾರರು ಯಾವುದೇ ಕಾರಣಕ್ಕೂ ಮಾಹಿತಿ ನೀಡಬಾರದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>