ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಯಂತ್ರಿಸಲು ಆಗ್ರಹ: ಋಷಿಕುಮಾರ ಸ್ವಾಮೀಜಿ

ಶಾಸಕ ರೇಣುಕಾಚಾರ್ಯರ ಮನೆಗೆ ಕಾಳಿಮಠದ ಋಷಿಕುಮಾರ ಸ್ವಾಮೀಜಿ ಭೇಟಿ
Last Updated 14 ಮಾರ್ಚ್ 2021, 21:42 IST
ಅಕ್ಷರ ಗಾತ್ರ

ಹೊನ್ನಾಳಿ: ‘ರಾಜ್ಯದಲ್ಲಿ ಮತಾಂತರ ಎಗ್ಗಿಲ್ಲದೇ ನಡೆಯುತ್ತಿದೆ. ಇದು ಬಿಜೆಪಿ ಶಾಸಕರ ತಾಯಿಯನ್ನೂ ಬಿಟ್ಟಿಲ್ಲ. ಮತಾಂತರ ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗುವುದು’ ಎಂದುಕಾಳಿಮಠದ ಋಷಿಕುಮಾರ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಅಲ್ಪಸಂಖ್ಯಾತರಿಗೆ ಹಾಗೂ ಕ್ರೈಸ್ತ ಮಿಷನರಿಗಳಿಗೆ ನೀಡುತ್ತಿರುವ ಅನುದಾನವನ್ನು ತಕ್ಷಣ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಲಾಗುವುದು’ ಎಂದರು.

‘ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇರಬೇಕು. ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಮರು ಎರಡು ಮಕ್ಕಳನ್ನು ಮಾತ್ರ ಹೊಂದಬೇಕು. ಪ್ರತಿನಿತ್ಯ ಹುಟ್ಟುವ ಮಕ್ಕಳಲ್ಲಿ ಶೇ 80ರಷ್ಟು ಮಕ್ಕಳು ಮುಸ್ಲಿಮರ ಕುಟುಂಬಗಳಲ್ಲಿ ಹುಟ್ಟುತ್ತಿವೆ. ಇದು ಹೀಗೆಯೇ ಮುಂದುವರಿದರೆ ಒಂದಲ್ಲಾ ಒಂದು ದಿನ ಭಾರತ ಮುಸ್ಲಿಂ ರಾಷ್ಟ್ರ ಆಗುವುದರಲ್ಲಿ ಅನುಮಾನ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT