ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ಇಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯದ ಸಂಸತ್ ಸದಸ್ಯರ ಸಭೆಗೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ನದಿ ಕಣಿವೆಯಲ್ಲಿ ಲಭ್ಯವಿರುವ ನೀರು, ನದಿ ಜೋಡಣೆಯಿಂದ ದೊರೆಯುವ ನೀರು ನಮ್ಮ ಅಗತ್ಯವನ್ನು ಪೂರೈಸುವಂತಾಗಬೇಕು ಕೂಡಲೇ ಆಯಾ ರಾಜ್ಯಗಳ ಪಾಲನ್ನು ನಿರ್ಧಾರವಾಗಬೇಕು ಎಂಬುದು ನಮ್ಮ ನಿಲುವು’ ಎಂದರು.