<p><strong>ಚಿತ್ರದುರ್ಗ</strong>: ರಸ್ತೆ ವಿಸ್ತರಣೆಯ ಸಂದರ್ಭದಲ್ಲಿ ಮಧ್ಯಭಾಗಕ್ಕೆ ಬಂದ ವಿದ್ಯುತ್ ಕಂಬವನ್ನು ತೆರವುಗೊಳಿಸದೇ ಕಾಂಕ್ರಿಟ್ ಕಾಮಗಾರಿಯನ್ನು ಗುತ್ತಿಗೆದಾರ ಪೂರ್ಣಗೊಳಿಸಿದ್ದಾರೆ. ಇದರ ಫೋಟೊ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.</p>.<p>ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿ ಇಂತಹದೊಂದು ಲೋಪ ಕಂಡುಬಂದಿದೆ. ರಸ್ತೆಯ ಮಧ್ಯಭಾಗದ ವಿದ್ಯುತ್ ಕಂಬಗಳು ಅಪಘಾತಕ್ಕೆ ಆಹ್ವಾನ ನೀಡುವಂತಿವೆ.</p>.<p>ತುರುವನೂರು ರಸ್ತೆಯ ವಿಸ್ತರಣೆ ಕಾಮಗಾರಿಯನ್ನು ₹ 7 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಒಂದೂವರೆ ವರ್ಷದಿಂದ ಕಾಮಗಾರಿ ನಡೆಯುತ್ತಿದೆ. ರಸ್ತೆಯ ಮಧ್ಯಭಾಗದಿಂದ ಎರಡೂ ಬದಿಗೆ 10.5 ಮೀಟರ್ ವಿಸ್ತರಣೆ ಮಾಡಲಾಗುತ್ತಿದೆ. ವಿದ್ಯುತ್ ಕಂಬ, ಕಟ್ಟಡಗಳನ್ನು ತೆರವುಗೊಳಿಸದೇ ಕಾಮಗಾರಿ ಪೂರ್ಣಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.</p>.<p>ಬಿ.ಎಲ್.ಗೌಡ ಬಡಾವಣೆಯ ವಿಷ್ಣುವರ್ಧನ್ ಉದ್ಯಾನದ ಸಮೀಪ ಕೆಲ ವಿದ್ಯುತ್ ಕಂಬಗಳು ರಸ್ತೆಯ ಮಧ್ಯಭಾಗದಲ್ಲಿವೆ. ಲೋಕೋಪಯೋಗಿ ಇಲಾಖೆಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗ ಈ ಕಂಬಗಳನ್ನು ಸ್ಥಳಾಂತರ ಮಾಡಬೇಕಿತ್ತು. ಈ ಕಾರ್ಯ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದರಿಂದ ಕುಪಿತಗೊಂಡ ಗುತ್ತಿಗೆದಾರ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಿದ್ದಾರೆ.</p>.<p>ರಸ್ತೆ ವಿಸ್ತರಣೆಯ ಉದ್ದೇಶಕ್ಕೆ ಈ ಮಾರ್ಗದಲ್ಲಿ ಈಗಾಗಲೇ 108 ಮರಗಳನ್ನು ಹನನ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಕಾಂಪೌಂಡ್ ಕೂಡ ತೆರವುಗೊಳಿಸಲಾಗಿದೆ. ಕೆಲ ಖಾಸಗಿ ಕಟ್ಟಡಗಳ ತೆರವು ಕಾರ್ಯ ಸಕಾಲಕ್ಕೆ ಪೂರ್ಣಗೊಳ್ಳುತ್ತಿಲ್ಲ. ನ್ಯಾಯಾಲಯದಲ್ಲಿರುವ ಪ್ರಕರಣದ ನೆಪ ಹೇಳಿಕೊಂಡು ಮೊದಲಿದ್ದಷ್ಟೇ ರಸ್ತೆಗೆ ಕಾಂಕ್ರಿಟ್ ಹಾಕಲಾಗುತ್ತಿದೆ.</p>.<p>‘ಭೀಮ್ ಆರ್ಮಿ’ ಸಂಘಟನೆಯ ಮುಖಂಡ ಅವಿನಾಶ್ ಎಂಬುವರು ಈ ಅವ್ಯವಸ್ಥೆಯ ಪರಿಯನ್ನು ಫೇಸ್ಬುಕ್ ಲೈವ್ ಮಾಡಿದ್ದರು. ಸಾರ್ವಜನಿಕರ ತೆರಿಗೆ ಹಣ ಲೋಪವಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ರಸ್ತೆ ವಿಸ್ತರಣೆಗೆ ಸರ್ಕಾರ ಅನುಮತಿ ನೀಡುವುದು ತಡವಾಯಿತು. ವಿದ್ಯುತ್ ಕಂಬ ತೆರವುಗೊಳಿಸುವುದಕ್ಕೆ ₹ 67 ಲಕ್ಷ ಅನುದಾನ ಮೀಸಲಿಡಲಾಗಿದೆ. ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ವಾರದಲ್ಲಿ ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡಲಾಗುವುದು’ ಎಂದು ಲೋಕೋಪಯೋಗಿ ಇಲಾಖೆಯ ಎಲೆಕ್ಟ್ರಿಕಲ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವೀಂದ್ರ ತಿಳಿಸಿದ್ದಾರೆ.</p>.<p>***</p>.<p>ರಸ್ತೆ ಬದಿಯಲ್ಲಿ ವಿದ್ಯುತ್ ಮಾರ್ಗ ನಿರ್ಮಾಣ ಮಾಡುವ ಮುನ್ನ ಲೋಕೋಪಯೋಗಿ ಇಲಾಖೆಯ ಅನುಮತಿ ಪಡೆಯಬೇಕು. ‘ಬೆಸ್ಕಾಂ’ ಈ ನಿಯಮವನ್ನು ಪಾಲನೆ ಮಾಡುತ್ತಿಲ್ಲ.</p>.<p>ರವೀಂದ್ರ, ಎಇಇ<br />ಲೋಕೋಪಯೋಗಿ ಇಲಾಖೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ರಸ್ತೆ ವಿಸ್ತರಣೆಯ ಸಂದರ್ಭದಲ್ಲಿ ಮಧ್ಯಭಾಗಕ್ಕೆ ಬಂದ ವಿದ್ಯುತ್ ಕಂಬವನ್ನು ತೆರವುಗೊಳಿಸದೇ ಕಾಂಕ್ರಿಟ್ ಕಾಮಗಾರಿಯನ್ನು ಗುತ್ತಿಗೆದಾರ ಪೂರ್ಣಗೊಳಿಸಿದ್ದಾರೆ. ಇದರ ಫೋಟೊ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.</p>.<p>ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿ ಇಂತಹದೊಂದು ಲೋಪ ಕಂಡುಬಂದಿದೆ. ರಸ್ತೆಯ ಮಧ್ಯಭಾಗದ ವಿದ್ಯುತ್ ಕಂಬಗಳು ಅಪಘಾತಕ್ಕೆ ಆಹ್ವಾನ ನೀಡುವಂತಿವೆ.</p>.<p>ತುರುವನೂರು ರಸ್ತೆಯ ವಿಸ್ತರಣೆ ಕಾಮಗಾರಿಯನ್ನು ₹ 7 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಒಂದೂವರೆ ವರ್ಷದಿಂದ ಕಾಮಗಾರಿ ನಡೆಯುತ್ತಿದೆ. ರಸ್ತೆಯ ಮಧ್ಯಭಾಗದಿಂದ ಎರಡೂ ಬದಿಗೆ 10.5 ಮೀಟರ್ ವಿಸ್ತರಣೆ ಮಾಡಲಾಗುತ್ತಿದೆ. ವಿದ್ಯುತ್ ಕಂಬ, ಕಟ್ಟಡಗಳನ್ನು ತೆರವುಗೊಳಿಸದೇ ಕಾಮಗಾರಿ ಪೂರ್ಣಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.</p>.<p>ಬಿ.ಎಲ್.ಗೌಡ ಬಡಾವಣೆಯ ವಿಷ್ಣುವರ್ಧನ್ ಉದ್ಯಾನದ ಸಮೀಪ ಕೆಲ ವಿದ್ಯುತ್ ಕಂಬಗಳು ರಸ್ತೆಯ ಮಧ್ಯಭಾಗದಲ್ಲಿವೆ. ಲೋಕೋಪಯೋಗಿ ಇಲಾಖೆಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗ ಈ ಕಂಬಗಳನ್ನು ಸ್ಥಳಾಂತರ ಮಾಡಬೇಕಿತ್ತು. ಈ ಕಾರ್ಯ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದರಿಂದ ಕುಪಿತಗೊಂಡ ಗುತ್ತಿಗೆದಾರ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಿದ್ದಾರೆ.</p>.<p>ರಸ್ತೆ ವಿಸ್ತರಣೆಯ ಉದ್ದೇಶಕ್ಕೆ ಈ ಮಾರ್ಗದಲ್ಲಿ ಈಗಾಗಲೇ 108 ಮರಗಳನ್ನು ಹನನ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಕಾಂಪೌಂಡ್ ಕೂಡ ತೆರವುಗೊಳಿಸಲಾಗಿದೆ. ಕೆಲ ಖಾಸಗಿ ಕಟ್ಟಡಗಳ ತೆರವು ಕಾರ್ಯ ಸಕಾಲಕ್ಕೆ ಪೂರ್ಣಗೊಳ್ಳುತ್ತಿಲ್ಲ. ನ್ಯಾಯಾಲಯದಲ್ಲಿರುವ ಪ್ರಕರಣದ ನೆಪ ಹೇಳಿಕೊಂಡು ಮೊದಲಿದ್ದಷ್ಟೇ ರಸ್ತೆಗೆ ಕಾಂಕ್ರಿಟ್ ಹಾಕಲಾಗುತ್ತಿದೆ.</p>.<p>‘ಭೀಮ್ ಆರ್ಮಿ’ ಸಂಘಟನೆಯ ಮುಖಂಡ ಅವಿನಾಶ್ ಎಂಬುವರು ಈ ಅವ್ಯವಸ್ಥೆಯ ಪರಿಯನ್ನು ಫೇಸ್ಬುಕ್ ಲೈವ್ ಮಾಡಿದ್ದರು. ಸಾರ್ವಜನಿಕರ ತೆರಿಗೆ ಹಣ ಲೋಪವಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ರಸ್ತೆ ವಿಸ್ತರಣೆಗೆ ಸರ್ಕಾರ ಅನುಮತಿ ನೀಡುವುದು ತಡವಾಯಿತು. ವಿದ್ಯುತ್ ಕಂಬ ತೆರವುಗೊಳಿಸುವುದಕ್ಕೆ ₹ 67 ಲಕ್ಷ ಅನುದಾನ ಮೀಸಲಿಡಲಾಗಿದೆ. ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ವಾರದಲ್ಲಿ ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡಲಾಗುವುದು’ ಎಂದು ಲೋಕೋಪಯೋಗಿ ಇಲಾಖೆಯ ಎಲೆಕ್ಟ್ರಿಕಲ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವೀಂದ್ರ ತಿಳಿಸಿದ್ದಾರೆ.</p>.<p>***</p>.<p>ರಸ್ತೆ ಬದಿಯಲ್ಲಿ ವಿದ್ಯುತ್ ಮಾರ್ಗ ನಿರ್ಮಾಣ ಮಾಡುವ ಮುನ್ನ ಲೋಕೋಪಯೋಗಿ ಇಲಾಖೆಯ ಅನುಮತಿ ಪಡೆಯಬೇಕು. ‘ಬೆಸ್ಕಾಂ’ ಈ ನಿಯಮವನ್ನು ಪಾಲನೆ ಮಾಡುತ್ತಿಲ್ಲ.</p>.<p>ರವೀಂದ್ರ, ಎಇಇ<br />ಲೋಕೋಪಯೋಗಿ ಇಲಾಖೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>