ಬೆಂಗಳೂರು: ‘ಕುವೆಂಪು ಅವರ ವ್ಯಕ್ತಿತ್ವಕ್ಕಾಗಲೀ, ಬರಹಕ್ಕಾಗಲೀ ಅವಮಾನ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಕುವೆಂಪು ಬರಹಗಳನ್ನು ಶಾಲಾ ದಿನಗಳಿಂದಲೂ ಓದಿಕೊಂಡು ಬಂದಿದ್ದೇನೆ. ‘ಶ್ರೀರಾಮಾಯಣ ದರ್ಶನಂ’ ಮಹಾಕಾವ್ಯದ ಕೆಲವು ವಿಶಿಷ್ಟ ಪಾತ್ರಗಳ ಬಗ್ಗೆ ಉಪನ್ಯಾಸ ಮಾಡಿದ್ದೇನೆ ಮತ್ತು ಬರೆದಿದ್ದೇನೆ’ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.