<p><strong>ಕಾರವಾರ:</strong> ‘ಕರಾವಳಿ ಜಿಲ್ಲೆಗಳಿಗೆ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 500 ಪ್ರೋತ್ಸಾಹ ಧನ ನೀಡಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 2,040 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಆದರೆ,ಕುಚಲಕ್ಕಿಗೆ ಬಳಸುವ ಭತ್ತವನ್ನು ಕೇರಳ ರಾಜ್ಯದ ಪಡಿತರ ವ್ಯವಸ್ಥೆಯಡಿ ₹ 2,220ರಂತೆ ಖರೀದಿಸಲಾಗುತ್ತಿದೆ. ನಮ್ಮ ರಾಜ್ಯದ ಹಲವು ರೈತರು ಆ ರಾಜ್ಯಕ್ಕೆ ಭತ್ತ ಮಾರಾಟ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲೂ ಕುಚಲಕ್ಕಿಯ ಭತ್ತಕ್ಕೆ ಸೀಮಿತವಾಗಿ ₹ 500 ಪ್ರೋತ್ಸಾಹ ಧನ ನೀಡಿ ಒಟ್ಟು ₹ 2,540ರಂತೆ ಖರೀದಿಸಲಾಗುವುದು. ಖರೀದಿ ಕೇಂದ್ರಗಳನ್ನು ಶೀಘ್ರವೇ ಆರಂಭಿಸಲಾಗುತ್ತದೆ. ಆದ್ದರಿಂದ ರೈತರು ತರಾತುರಿಯಲ್ಲಿ ಭತ್ತ ಮಾರಾಟ ಮಾಡಬಾರದು’ ಎಂದು ಮನವಿ ಮಾಡಿದರು.</p>.<p>‘ದಕ್ಷಿಣ ಕನ್ನಡ, ಉಡುಪಿ ಹಾಗೂ ಭಾಗಶಃ ಉತ್ತರ ಕನ್ನಡಕ್ಕೆ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿ ತಿಂಗಳಿಗೆ 1 ಲಕ್ಷ ಕ್ವಿಂಟಲ್ ಅಕ್ಕಿ ಬೇಕಾಗುತ್ತದೆ. ರಾಜ್ಯದ ಯಾವುದೇ ಜಿಲ್ಲೆಯಿಂದಾದರೂ ಅಕ್ಕಿಯನ್ನು ಖರೀದಿಸಿ ಆಯಾ ಜಿಲ್ಲೆಗಳಲ್ಲೇ ಸಂಸ್ಕರಿಸಿ ವಿತರಿಸುವಂತೆ ಕೇಂದ್ರ ಸರ್ಕಾರವೂ ನಿರ್ದೇಶನ ನೀಡಿದೆ’ ಎಂದು ಹೇಳಿದರು.</p>.<p>‘ಅಲ್ಲದೇ, ಕುಚಲಕ್ಕಿ ವಿತರಣೆ ಯೋಜನೆಗೆ ₹ 132 ಕೋಟಿ ಮಂಜೂರು ಮಾಡುವಂತೆ ಸಿ.ಎಂಗೆ ಮನವಿ ಮಾಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಕರಾವಳಿ ಜಿಲ್ಲೆಗಳಿಗೆ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 500 ಪ್ರೋತ್ಸಾಹ ಧನ ನೀಡಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 2,040 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಆದರೆ,ಕುಚಲಕ್ಕಿಗೆ ಬಳಸುವ ಭತ್ತವನ್ನು ಕೇರಳ ರಾಜ್ಯದ ಪಡಿತರ ವ್ಯವಸ್ಥೆಯಡಿ ₹ 2,220ರಂತೆ ಖರೀದಿಸಲಾಗುತ್ತಿದೆ. ನಮ್ಮ ರಾಜ್ಯದ ಹಲವು ರೈತರು ಆ ರಾಜ್ಯಕ್ಕೆ ಭತ್ತ ಮಾರಾಟ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲೂ ಕುಚಲಕ್ಕಿಯ ಭತ್ತಕ್ಕೆ ಸೀಮಿತವಾಗಿ ₹ 500 ಪ್ರೋತ್ಸಾಹ ಧನ ನೀಡಿ ಒಟ್ಟು ₹ 2,540ರಂತೆ ಖರೀದಿಸಲಾಗುವುದು. ಖರೀದಿ ಕೇಂದ್ರಗಳನ್ನು ಶೀಘ್ರವೇ ಆರಂಭಿಸಲಾಗುತ್ತದೆ. ಆದ್ದರಿಂದ ರೈತರು ತರಾತುರಿಯಲ್ಲಿ ಭತ್ತ ಮಾರಾಟ ಮಾಡಬಾರದು’ ಎಂದು ಮನವಿ ಮಾಡಿದರು.</p>.<p>‘ದಕ್ಷಿಣ ಕನ್ನಡ, ಉಡುಪಿ ಹಾಗೂ ಭಾಗಶಃ ಉತ್ತರ ಕನ್ನಡಕ್ಕೆ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿ ತಿಂಗಳಿಗೆ 1 ಲಕ್ಷ ಕ್ವಿಂಟಲ್ ಅಕ್ಕಿ ಬೇಕಾಗುತ್ತದೆ. ರಾಜ್ಯದ ಯಾವುದೇ ಜಿಲ್ಲೆಯಿಂದಾದರೂ ಅಕ್ಕಿಯನ್ನು ಖರೀದಿಸಿ ಆಯಾ ಜಿಲ್ಲೆಗಳಲ್ಲೇ ಸಂಸ್ಕರಿಸಿ ವಿತರಿಸುವಂತೆ ಕೇಂದ್ರ ಸರ್ಕಾರವೂ ನಿರ್ದೇಶನ ನೀಡಿದೆ’ ಎಂದು ಹೇಳಿದರು.</p>.<p>‘ಅಲ್ಲದೇ, ಕುಚಲಕ್ಕಿ ವಿತರಣೆ ಯೋಜನೆಗೆ ₹ 132 ಕೋಟಿ ಮಂಜೂರು ಮಾಡುವಂತೆ ಸಿ.ಎಂಗೆ ಮನವಿ ಮಾಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>