ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 2,040 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಆದರೆ,ಕುಚಲಕ್ಕಿಗೆ ಬಳಸುವ ಭತ್ತವನ್ನು ಕೇರಳ ರಾಜ್ಯದ ಪಡಿತರ ವ್ಯವಸ್ಥೆಯಡಿ ₹ 2,220ರಂತೆ ಖರೀದಿಸಲಾಗುತ್ತಿದೆ. ನಮ್ಮ ರಾಜ್ಯದ ಹಲವು ರೈತರು ಆ ರಾಜ್ಯಕ್ಕೆ ಭತ್ತ ಮಾರಾಟ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲೂ ಕುಚಲಕ್ಕಿಯ ಭತ್ತಕ್ಕೆ ಸೀಮಿತವಾಗಿ ₹ 500 ಪ್ರೋತ್ಸಾಹ ಧನ ನೀಡಿ ಒಟ್ಟು ₹ 2,540ರಂತೆ ಖರೀದಿಸಲಾಗುವುದು. ಖರೀದಿ ಕೇಂದ್ರಗಳನ್ನು ಶೀಘ್ರವೇ ಆರಂಭಿಸಲಾಗುತ್ತದೆ. ಆದ್ದರಿಂದ ರೈತರು ತರಾತುರಿಯಲ್ಲಿ ಭತ್ತ ಮಾರಾಟ ಮಾಡಬಾರದು’ ಎಂದು ಮನವಿ ಮಾಡಿದರು.