ಬಳ್ಳಾರಿ: ಗ್ರಾಮೀಣಾಭಿವೃದ್ಧಿ ಇಲಾಖೆಯ ಹಣವನ್ನು ಬೇನಾಮಿ ಖಾತೆಯಲ್ಲಿಟ್ಟಿ ದ್ದ ಪ್ರಕರಣ ಕುರಿತು ವಿಚಾರಣೆ ನಡೆಯುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದರು. ಎಚ್.ಕೆ.ಪಾಟೀಲರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಸಂದರ್ಭ ದಲ್ಲಿ ಬೇನಾಮಿ ಖಾತೆಯಲ್ಲಿ ಹಣ ಇಡಲಾಗಿತ್ತು ಎಂಬ ಪ್ರಕರಣ ಕುರಿತು ಉನ್ನತ ಅಧಿಕಾರಿ ನೇತೃತ್ವದ ಸಮಿತಿ ವಿಚಾರಣೆ ನಡೆಸುತ್ತಿದೆ. ಅಲ್ಲದೆ, ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಸಮಿತಿಯೂ ಪರಿಶೀಲಿಸುತ್ತಿದೆ ಎಂದರು.