‘ಸಭೆಯು ಈ ಬಾರಿ ನಾಗಪುರದಲ್ಲಿ ನಡೆಯಬೇಕಾಗಿತ್ತು. ಆದರೆ, ಅಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಂಡಿರುವ ಕಾರಣ ಬೆಂಗಳೂರಿನಲ್ಲಿಯೇ ಆಯೋಜಿಸಲಾಗಿದೆ. ಮೂರು ದಿನಗಳು ನಡೆಯುತ್ತಿದ್ದ ಸಭೆಯನ್ನು ಈ ಬಾರಿ ಎರಡು ದಿನಗಳಿಗೆ ಸೀಮಿತಗೊಳಿಸಲಾಗಿದೆ.ಸರಸಂಘಚಾಲಕರಾದ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹರಾದ ಸುರೇಶ್ (ಭಯ್ಯಾಜೀ) ಜೋಷಿಯವರು ಈ ಸಭೆಯ ಕಲಾಪಗಳನ್ನು ನಡೆಸಲಿದ್ದಾರೆ. ಕಳೆದ ಮೂರು ವರ್ಷ ಸಂಘ ಕೈಗೊಂಡ ಕಾರ್ಯಚಟುವಟಿಕೆಯನ್ನೂ ಮೌಲ್ಯಮಾಪನ ಮಾಡಲಾಗುತ್ತದೆ. ಸಂಘದ ವಾರ್ಷಿಕ ವರದಿ, ಸಂಘಟನೆಯ ವಿಸ್ತಾರ, ಹೊಸ ಆಯಾಮಗಳು, ಕಾರ್ಯಕ್ರಮಗಳು, ಮುಂಬರುವ ವರ್ಷದ ಯೋಜನೆ ಇತ್ಯಾದಿ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿದೆ’ ಎಂದು ವಿವರಿಸಿದರು.