<p><strong>ಬೆಂಗಳೂರು: </strong>ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವತ್ತೂ ಅಧಿಕಾರಕ್ಕಾಗಿ ಹೋರಾಡಿಲ್ಲ. ಸಮಾಜ ಸೇವೆಗೆ ಸಮರ್ಪಣೆ ಮಾಡಿಕೊಂಡಿರುವ ಆರ್ಎಸ್ಎಸ್ಗೆ ಕುರ್ಚಿ ವ್ಯಾಮೋಹವಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಆರ್ಎಸ್ಎಸ್ ಕುರಿತು ವಿರೋಧ ಪಕ್ಷಗಳ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆರ್ಎಸ್ಎಸ್ ಕುರಿತು ಮಾತನಾಡುವ ನೈತಿಕತೆ ಇಲ್ಲ. ಕುರ್ಚಿ ವ್ಯಾಮೋಹ ಇರುವುದು ಕಾಂಗ್ರೆಸ್ ಮತ್ತು ಜೆಡಿಎಸ್ನವರಿಗೆ. ಸಂಘ ಪರಿವಾರದವರಿಗೆ ಅಲ್ಲ’ ಎಂದರು.</p>.<p>ಸಿದ್ದರಾಮಯ್ಯ ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಟಿಪ್ಪು ಜಯಂತಿ ಮಾಡಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮತಕ್ಕಾಗಿ ಆರ್ಎಸ್ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ತಾಲಿಬಾನ್ ಸಂಸ್ಕೃತಿ ಅವರದ್ದು, ಸಂಘ ಪರಿವಾರದ್ದಲ್ಲ ಎಂದು ಹೇಳಿದರು.</p>.<p>ಪ್ರತಿಭಾವಂತರು ಯಾವುದೇ ಕಡೆ ಇರಬಹುದು. ಅದೇ ರೀತಿ ಆರ್ಎಸ್ಎಸ್ನಲ್ಲೂ ಇದ್ದಾರೆ. ಪ್ರತಿಭಾವಂತರು ಉನ್ನತ ಹುದ್ದೆಗಳಿಗೇರುವುದು ತಪ್ಪಲ್ಲ ಎಂದರು.</p>.<p><strong>ಬಿಎಸ್ವೈಗೆ ಸಂಬಂಧವಿಲ್ಲ:</strong> ‘ಬಿ.ಎಸ್. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ ಎಂಬುದು ಸತ್ಯಕ್ಕೆ ದೂರ. ದಾಳಿ ನಡೆದಿರುವುದು ಉಮೇಶ್ ಮೇಲೆ. ಅದಕ್ಕೂ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವತ್ತೂ ಅಧಿಕಾರಕ್ಕಾಗಿ ಹೋರಾಡಿಲ್ಲ. ಸಮಾಜ ಸೇವೆಗೆ ಸಮರ್ಪಣೆ ಮಾಡಿಕೊಂಡಿರುವ ಆರ್ಎಸ್ಎಸ್ಗೆ ಕುರ್ಚಿ ವ್ಯಾಮೋಹವಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಆರ್ಎಸ್ಎಸ್ ಕುರಿತು ವಿರೋಧ ಪಕ್ಷಗಳ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆರ್ಎಸ್ಎಸ್ ಕುರಿತು ಮಾತನಾಡುವ ನೈತಿಕತೆ ಇಲ್ಲ. ಕುರ್ಚಿ ವ್ಯಾಮೋಹ ಇರುವುದು ಕಾಂಗ್ರೆಸ್ ಮತ್ತು ಜೆಡಿಎಸ್ನವರಿಗೆ. ಸಂಘ ಪರಿವಾರದವರಿಗೆ ಅಲ್ಲ’ ಎಂದರು.</p>.<p>ಸಿದ್ದರಾಮಯ್ಯ ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಟಿಪ್ಪು ಜಯಂತಿ ಮಾಡಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮತಕ್ಕಾಗಿ ಆರ್ಎಸ್ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ತಾಲಿಬಾನ್ ಸಂಸ್ಕೃತಿ ಅವರದ್ದು, ಸಂಘ ಪರಿವಾರದ್ದಲ್ಲ ಎಂದು ಹೇಳಿದರು.</p>.<p>ಪ್ರತಿಭಾವಂತರು ಯಾವುದೇ ಕಡೆ ಇರಬಹುದು. ಅದೇ ರೀತಿ ಆರ್ಎಸ್ಎಸ್ನಲ್ಲೂ ಇದ್ದಾರೆ. ಪ್ರತಿಭಾವಂತರು ಉನ್ನತ ಹುದ್ದೆಗಳಿಗೇರುವುದು ತಪ್ಪಲ್ಲ ಎಂದರು.</p>.<p><strong>ಬಿಎಸ್ವೈಗೆ ಸಂಬಂಧವಿಲ್ಲ:</strong> ‘ಬಿ.ಎಸ್. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ ಎಂಬುದು ಸತ್ಯಕ್ಕೆ ದೂರ. ದಾಳಿ ನಡೆದಿರುವುದು ಉಮೇಶ್ ಮೇಲೆ. ಅದಕ್ಕೂ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>