ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪಿಎಫ್ಐ ನಿಷೇಧಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ, ಸಮರ್ಥನೆ ಮಾಡಿಕೊಳ್ಳಲು ಕಾಂಗ್ರೆಸ್'ನಲ್ಲಿ ಯಾವ ಆಧಾರಗಳೂ ಇಲ್ಲ. ಈ ಹಿಂದೆ ಸಿದ್ಧರಾಮಯ್ಯನವರೇ ಪಿಎಫ್ಐ ಸಂಘಟನೆ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದರು. ಆರ್.ಎಸ್.ಎಸ್. ದೇಶಪ್ರೇಮಿಗಳ ಸಂಘಟನೆ. ಬಡ ಮಕ್ಕಳಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದೆ. ಪ್ರವಾಹ, ಸಂಕಷ್ಟಗಳು ಎದುರಾದಾಗ ಸಂತ್ರಸ್ತರ ನೆರವಿಗೆ ನಿಂತು ಕೆಲಸ ಮಾಡುತ್ತದೆ. ಇಂತಹ ಸಂಘಟನೆಯನ್ನು ನಿಷೇಧಿಸಬೇಕೆನ್ನುವ ಆಗ್ರಹ ಸರಿಯಲ್ಲ' ಎಂದರು.