<p><strong>ಧಾರವಾಡ</strong>: ‘ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ’ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ತಿಳಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ, ದೇಶ ಹಾಗೂ ನಮ್ಮ ಸ್ವಾಭಿಮಾನದ ಕುರಿತು ತೆಗೆದುಕೊಳ್ಳಬೇಕಾದ ನಿಲುವುಗಳ ಬಗೆಗೆ ಚರ್ಚೆಗಳು ನಡೆಯಲಿವೆ’ ಎಂದರು.</p>.<p>‘ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ. 2025ಕ್ಕೆ ಆರ್ಎಸ್ಎಸ್ ಶತಮಾನೋತ್ಸವವಿದೆ. 2021 ರಿಂದ 2024ರ ಅವಧಿಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಗುವುದು’ ಎಂದರು.</p>.<p>‘ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್ಎಸ್ಎಸ್ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ ಸುಮಾರು 350 ಪ್ರತಿನಿಧಿಗಳು ಭಾಗವಹಿಸುವರು’ ಎಂದರು.</p>.<p>‘ಕೊರೊನಾ ಸಮಯದಲ್ಲಿ ‘ಸೇವಾ ಭಾರತಿ’ಯಅನೇಕ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. 3ನೇ ಅಲೆ ಎದುರಿಸಲು 1.50 ಲಕ್ಷ ಸ್ಥಳಗಳಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ’ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ತಿಳಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ, ದೇಶ ಹಾಗೂ ನಮ್ಮ ಸ್ವಾಭಿಮಾನದ ಕುರಿತು ತೆಗೆದುಕೊಳ್ಳಬೇಕಾದ ನಿಲುವುಗಳ ಬಗೆಗೆ ಚರ್ಚೆಗಳು ನಡೆಯಲಿವೆ’ ಎಂದರು.</p>.<p>‘ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ. 2025ಕ್ಕೆ ಆರ್ಎಸ್ಎಸ್ ಶತಮಾನೋತ್ಸವವಿದೆ. 2021 ರಿಂದ 2024ರ ಅವಧಿಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಗುವುದು’ ಎಂದರು.</p>.<p>‘ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್ಎಸ್ಎಸ್ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ ಸುಮಾರು 350 ಪ್ರತಿನಿಧಿಗಳು ಭಾಗವಹಿಸುವರು’ ಎಂದರು.</p>.<p>‘ಕೊರೊನಾ ಸಮಯದಲ್ಲಿ ‘ಸೇವಾ ಭಾರತಿ’ಯಅನೇಕ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. 3ನೇ ಅಲೆ ಎದುರಿಸಲು 1.50 ಲಕ್ಷ ಸ್ಥಳಗಳಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>