‘ ಉಕ್ರೇನ್ನಲ್ಲಿ ಸಿಲುಕಿರುವ ಚನ್ನಪಟ್ಟಣ ತಾಲ್ಲೂಕಿನ ನಿವೇದಿತಾ ಎಂಬ ವಿದ್ಯಾರ್ಥಿನಿ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಅಲ್ಲಿ ಸಿಲುಕಿರುವ ರಾಜ್ಯದ ಕೆಲವು ವಿದ್ಯಾರ್ಥಿಗಳ ಮಾಹಿತಿಯನ್ನು ರಾಯಭಾರ ಕಚೇರಿಗೆ ನೀಡಿದ್ದು, ಅವರನ್ನು ರಕ್ಷಣೆ ಮಾಡುವಂತೆ ಮನವಿ ಮಾಡಿದ್ದೇನೆ. ವಿದ್ಯಾರ್ಥಿಗಳು ಒಂದು ವಾರ ಮುಂಚೆಯೇ ಬರಬೇಕಿತ್ತು. ಈಗ ಅಲ್ಲಿನ ವಿಮಾನ ನಿಲ್ದಾಣಗಳು ಮುಚ್ಚಿವೆ ಎಂದು ಎಂಬೆಸ್ಸಿ ಸಿಬ್ಬಂದಿ ಹೇಳುತ್ತಾರೆ’ ಎಂದು ಅವರು ವಿವರಿಸಿದರು.