ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಆ ಹುದ್ದೆಯ ಘನತೆ ಅರಿತು ಕೆಲಸ ಮಾಡಬೇಕು. ಚಾಣಾಕ್ಷ ಉತ್ತರ ನೀಡುವುದಕ್ಕೆ ಸೀಮಿತವಾಗಬಾರದು. ಸರ್ಕಾರದ ಭಾಗವಾಗಿರುವ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಕೆಳಹಂತದವರೆಗೂ ಇಳಿದು ತನಿಖೆ ನಡೆಸಿ, ಮತ್ತೆ ಅಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಜರುಗಿಸಬೇಕು’ ಎಂದರು.