‘ಕರ್ನಾಟಕದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದರೆ ಆಗಸ್ಟ್ನಲ್ಲಿ ಫಲಿತಾಂಶ ಘೋಷಿಸಬಹುದು. ನೀಟ್, ಜೆಇಇ, ಸಿಇಟಿ, ಐಸಿಎಆರ್ ಅಂಥ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳ ಸೂಕ್ತ ದಿನಾಂಕಗಳಂದು ಆಯೋಜಿಸಬಹುದು’ ಎಂದು ಸುರೇಶ್ ಕುಮಾರ್ ಸಲಹೆ ನೀಡಿದರು.