ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಎಂದು ಅರ್ಜಿ ಹಾಕಿದ್ದೇವೆಯೇ?: ಎಸ್‌.ಟಿ.ಸೋಮಶೇಖರ್‌

Last Updated 7 ಜುಲೈ 2021, 12:35 IST
ಅಕ್ಷರ ಗಾತ್ರ

ಮೈಸೂರು: ‘ನಮ್ಮನ್ನು ಮತ್ತೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಎಂದು ಅರ್ಜಿ ಹಾಕಿದ್ದೇವೆಯೇ? ಅವರ ಮನೆ ಬಾಗಿಲಿಗೆ ಹೋಗಿ ನಿಂತಿದ್ದೇವೆಯೇ? ಯಾರ ಜೊತೆಗಾದರೂ ಮಾತುಕತೆ ನಡೆಸಿದ್ದೇವೆಯೇ?’ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಪದೇಪದೇ ದ್ರೋಹ ಎಸಗುವವರನ್ನು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಅವರೇ ಜೆಡಿಎಸ್‌ನಲ್ಲಿ ಅಧಿಕಾರ ಅನುಭವಿಸಿ ಕಾಂಗ್ರೆಸ್‌ಗೆ ಬಂದ ಗಿರಾಕಿ. ಡಿ.ಕೆ.ಶಿವಕುಮಾರ್‌ ಹಾಗೂ ಅವರ ನಡುವಿನ ಸಂಬಂಧ ಸರಿ ಇಲ್ಲ. ಅದನ್ನು ಮುಚ್ಚಿ ಹಾಕಿಕೊಳ್ಳಲು ನಮ್ಮ ವಿಚಾರವನ್ನು ಪದೇಪದೇ ಪ್ರಸ್ತಾಪ ಮಾಡುತ್ತಿದ್ದಾರೆ. ಇಬ್ಬರೂ ಹೊಸ ಆಟವಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT