ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ತಿಮ್ಮಕ್ಕ, ತಮ್ಮ ಪರಿಸರ ಕಾರ್ಯವನ್ನು ಬಿಚ್ಚಿಟ್ಟರು. ‘ನನಗೆ ಅನೇಕ ಪ್ರಶಸ್ತಿಗಳು ಪುರಸ್ಕಾರಗಳು ಸಿಕ್ಕಿವೆ. ಅವುಗಳನ್ನು ಇಡಲು ಜಾಗ ಇಲ್ಲ. ಸಾಗರೋತ್ತರ ಕನ್ನಡಿಗರೆಲ್ಲಾ ಸೇರಿ ಒಂದು ಮ್ಯೂಸಿಯಂ ಕಟ್ಟಿಸಿರಿ’ ಎಂದರು. ಇದಕ್ಕೆ ಬಹುತೇಕ ಸದಸ್ಯರು ಸಹಮತ ಸೂಚಿಸಿದರು ಎಂದು ಇಟಲಿಯಲ್ಲಿರುವ ಸಂಘಟನಾ ಕಾರ್ಯದರ್ಶಿ ಹೇಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.