ತಮ್ಮ ಕಂಪನಿ ವಿವಿಧ ಟೆಲಿವಿಷನ್ ಚಾನೆಲ್ಗಳಿಂದ ಕೇಬಲ್ ನೆಟ್ವರ್ಕ್ಗಳಿಗೆ ಸಂಪರ್ಕ ಒದಗಿಸುವ ಕೆಲಸ ಮಾಡುತ್ತಿದೆ. ಇದಕ್ಕಾಗಿ ಕೇಬಲ್ ಆಪರೇಟರ್ಗಳು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಬಾಬ್ತು ಪಾವತಿಸಿದ್ದ ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಬ್ಯಾಂಕ್ಗೆ ಜಮೆ ಮಾಡುವ ಮೊದಲು ಅದನ್ನು ಸಿಬಿಐ ವಶಕ್ಕೆ ಪಡೆದಿತ್ತು ಎಂದು ಸಚಿನ್ ನಾರಾಯಣ್ ಅರ್ಜಿಯಲ್ಲಿ ದೂರಿದ್ದರು. ಈ ಮೊತ್ತ ಮರಳಿಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆ ವೈಯಕ್ತಿಕವಾಗಿ ಮತ್ತು ಕಂಪನಿಯಿಂದ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.