ಬೆಂಗಳೂರು: ‘ಎರಡು ವರ್ಷದ ಹಿಂದೆ ಜೆಡಿಎಸ್, ಕಾಂಗ್ರೆಸ್ ತೊರೆದು ವಲಸಿಗರಾಗಿ ಬಂದು ಈ ಸರ್ಕಾರದಲ್ಲಿ ಶಾಸಕರು, ಮಂತ್ರಿಗಳಾದವರು ‘ತ್ಯಾಗಕ್ಕೆ ತಕ್ಕ ಬೆಲೆ ಸಿಕ್ಕಿಲ್ಲ’ ಎಂದು ವಿಲವಿಲ ಒದ್ದಾಡುತ್ತಿದ್ದಾರೆ. ಇವರು ತ್ಯಾಗ ಮಾಡಿದ್ದಾದರೂ ಏನು’ ಎಂದು ಕಾಂಗ್ರೆಸ್ ಮುಖಂಡ ಪ್ರೊ.ಬಿ.ಕೆ. ಚಂದ್ರಶೇಖರ್ ಪ್ರಶ್ನಿಸಿದ್ದಾರೆ.