<p><strong>ಬೆಂಗಳೂರು</strong>: ‘ವಿಧಾನಪರಿಷತ್ತಿನಲ್ಲಿ ಡಿ.15 ರಂದು ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಗಲಾಟೆಯ ವಿಚಾರಣೆಗೆಂದು ನೇಮಿಸಿದ್ದ ಸದನ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ.</p>.<p>ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ರಚಿಸಿದ್ದರು. ಸಮಿತಿ ಶುಕ್ರವಾರ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಪೂರ್ಣ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ.</p>.<p>ಅಶ್ವತ್ಥನಾರಾಯಣ, ಮಾಧುಸ್ವಾಮಿ ಮತ್ತು ಗಲಾಟೆ ಮಾಡಿದ ಇತರರ ಸದಸ್ಯರ ವಿರುದ್ಧವೂ ಕ್ರಮಕ್ಕೆ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಸಭಾಪತಿಗೆ ನೋಟಿಸ್:</strong> ಈ ಮಧ್ಯೆ ಬಿಜೆಪಿ ಸದಸ್ಯರು ಸಭಾಪತಿ ವಿರುದ್ಧ ಮತ್ತೊಮ್ಮೆ ಅವಿಶ್ವಾಸದ ನೋಟಿಸ್ ಕಳಿಸಿದ್ದಾರೆ. ‘ಬಿಜೆಪಿಯವರು ಅವಿಶ್ವಾಸ ನೋಟಿಸ್ ಕಳಿಸಿರುವ ವಿಚಾರ ಗೊತ್ತಿಲ್ಲ. ಅವರು ಯಾರಿಗೆ ಸಲ್ಲಿಸಿದ್ದಾರೆ ಎಂಬುದನ್ನು ಅವರಿಗೇ ಕೇಳಿ ನೋಡಿ. ಆ ನೋಟಿಸ್ ನನಗೆ ತಲುಪಿದರೆ ಏನಾದರೂ ಹೇಳಬಹುದು’ ಎಂದು ಪ್ರತಾಪಚಂದ್ರ ಶೆಟ್ಟಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ 28 ರಿಂದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿ ನೋಟಿಸ್ ನೀಡಿದೆ.</p>.<p class="Subhead"><strong>84 ಪುಟಗಳ ವರದಿ: </strong>ಸದನ ಸಮಿತಿ 84 ಪುಟಗಳ ಮಧ್ಯಂತರ ವರದಿ ಸಲ್ಲಿಸಿದೆ. ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶಕ್ಕೆ ಮನವಿ ಮಾಡಿದೆ. ಈ ಸಮಿತಿಗೆ ಬಿಜೆಪಿಯ ಎಚ್.ವಿಶ್ವನಾಥ್ ಮತ್ತು ಎಸ್.ವಿ.ಸಂಕನೂರು ಅವರು ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ಆರ್.ಬಿ.ತಿಮ್ಮಾಪೂರ ಅವರು ಮಾತ್ರ ಉಳಿದಿದ್ದರು. ಇಬ್ಬರು ಸದಸ್ಯರ ಒಳಗೊಂಡ ಸಮಿತಿ ಒಟ್ಟು 5 ಸಭೆಗಳನ್ನು ನಡೆಸಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಕಾರ್ಯದರ್ಶಿ, ಮಾರ್ಷಲ್, ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರಿಂದ ಹೇಳಿಕೆ ಪಡೆಯಲಾಗಿದೆ. ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ಕೋರಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ.</p>.<p>‘ಕಲಾಪದ ವೇಳೆ ಉಪಸ್ಥಿತರಿದ್ದ ಪತ್ರಕರ್ತರು, ಘಟನೆ ಕುರಿತು ಪತ್ರಕರ್ತರು, ಗಣ್ಯರು ಸಭಾಪತಿಗೆ ಬರೆದ ಪತ್ರಗಳನ್ನು ಪರಿಗಣಿಸಿ ಅಭಿಪ್ರಾಯ ಪಡೆಯಲು ಉದ್ದೇಶಿಸಲಾಗಿದೆ. ಮಧ್ಯಂತರ ವರದಿಯಲ್ಲಿ ಏನಿದೆ ಎಂಬುದು ಸದನದಲ್ಲೇ ಬಹಿರಂಗವಾಗಲಿದೆ. ವರದಿ ಈಗ ಸದನದ ಸ್ವತ್ತು’ ಎಂದು ಮರಿತಿಬ್ಬೇಗೌಡ ಹೇಳಿದರು.</p>.<p>‘ಮರಿತಿಬ್ಬೇಗೌಡ, ಬಿ.ಕೆ.ಹರಿಪ್ರಸಾದ್ ಅವರು ಗಲಾಟೆಯಲ್ಲಿ ಪಾಲ್ಗೊಂಡಿದ್ದರಿಂದ ಅವರನ್ನು ಸಮಿತಿಗೆ ಸೇರಿಸಿದ್ದು ಸರಿಯಲ್ಲ. ಸಮಿತಿಯಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ’ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದರು.</p>.<p class="Briefhead"><strong>‘ರಾಜೀನಾಮೆ ಬಗ್ಗೆ ಕಾದು ನೋಡಿ’</strong><br />‘ನನ್ನ ರಾಜೀನಾಮೆಯ ಬಗ್ಗೆ ಈಗಲೇ ಏನು ಹೇಳಲಾಗದು, ಕಾದು ನೋಡಿ. ಆದರೆ, ಉಪಸಭಾಪತಿ ಸ್ಥಾನವೇ ಖಾಲಿ ಇರುವಾಗ ಯಾರಿಗೆ ರಾಜೀನಾಮೆ ಕೊಡಬೇಕು’ ಎಂದು ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಪ್ರಶ್ನಿಸಿದರು.</p>.<p>ಸದನ ಸಮಿತಿಯಿಂದ ಮಧ್ಯಂತರ ವರದಿ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ಡಿ.15 ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ರಚಿಸಿರುವ ಸದನ ಸಮಿತಿ ಶಾಸನ ಬದ್ಧವಾಗಿದ್ದು, ಸಮಿತಿಯ ವರದಿಯೂ ಶಾಸನ ಬದ್ಧ ಎಂದು ಅವರು ಪ್ರತಾಪಚಂದ್ರ ಶೆಟ್ಟಿ ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿಧಾನಪರಿಷತ್ತಿನಲ್ಲಿ ಡಿ.15 ರಂದು ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಗಲಾಟೆಯ ವಿಚಾರಣೆಗೆಂದು ನೇಮಿಸಿದ್ದ ಸದನ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ.</p>.<p>ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ರಚಿಸಿದ್ದರು. ಸಮಿತಿ ಶುಕ್ರವಾರ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಪೂರ್ಣ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ.</p>.<p>ಅಶ್ವತ್ಥನಾರಾಯಣ, ಮಾಧುಸ್ವಾಮಿ ಮತ್ತು ಗಲಾಟೆ ಮಾಡಿದ ಇತರರ ಸದಸ್ಯರ ವಿರುದ್ಧವೂ ಕ್ರಮಕ್ಕೆ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಸಭಾಪತಿಗೆ ನೋಟಿಸ್:</strong> ಈ ಮಧ್ಯೆ ಬಿಜೆಪಿ ಸದಸ್ಯರು ಸಭಾಪತಿ ವಿರುದ್ಧ ಮತ್ತೊಮ್ಮೆ ಅವಿಶ್ವಾಸದ ನೋಟಿಸ್ ಕಳಿಸಿದ್ದಾರೆ. ‘ಬಿಜೆಪಿಯವರು ಅವಿಶ್ವಾಸ ನೋಟಿಸ್ ಕಳಿಸಿರುವ ವಿಚಾರ ಗೊತ್ತಿಲ್ಲ. ಅವರು ಯಾರಿಗೆ ಸಲ್ಲಿಸಿದ್ದಾರೆ ಎಂಬುದನ್ನು ಅವರಿಗೇ ಕೇಳಿ ನೋಡಿ. ಆ ನೋಟಿಸ್ ನನಗೆ ತಲುಪಿದರೆ ಏನಾದರೂ ಹೇಳಬಹುದು’ ಎಂದು ಪ್ರತಾಪಚಂದ್ರ ಶೆಟ್ಟಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ 28 ರಿಂದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿ ನೋಟಿಸ್ ನೀಡಿದೆ.</p>.<p class="Subhead"><strong>84 ಪುಟಗಳ ವರದಿ: </strong>ಸದನ ಸಮಿತಿ 84 ಪುಟಗಳ ಮಧ್ಯಂತರ ವರದಿ ಸಲ್ಲಿಸಿದೆ. ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶಕ್ಕೆ ಮನವಿ ಮಾಡಿದೆ. ಈ ಸಮಿತಿಗೆ ಬಿಜೆಪಿಯ ಎಚ್.ವಿಶ್ವನಾಥ್ ಮತ್ತು ಎಸ್.ವಿ.ಸಂಕನೂರು ಅವರು ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ಆರ್.ಬಿ.ತಿಮ್ಮಾಪೂರ ಅವರು ಮಾತ್ರ ಉಳಿದಿದ್ದರು. ಇಬ್ಬರು ಸದಸ್ಯರ ಒಳಗೊಂಡ ಸಮಿತಿ ಒಟ್ಟು 5 ಸಭೆಗಳನ್ನು ನಡೆಸಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಕಾರ್ಯದರ್ಶಿ, ಮಾರ್ಷಲ್, ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರಿಂದ ಹೇಳಿಕೆ ಪಡೆಯಲಾಗಿದೆ. ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ಕೋರಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ.</p>.<p>‘ಕಲಾಪದ ವೇಳೆ ಉಪಸ್ಥಿತರಿದ್ದ ಪತ್ರಕರ್ತರು, ಘಟನೆ ಕುರಿತು ಪತ್ರಕರ್ತರು, ಗಣ್ಯರು ಸಭಾಪತಿಗೆ ಬರೆದ ಪತ್ರಗಳನ್ನು ಪರಿಗಣಿಸಿ ಅಭಿಪ್ರಾಯ ಪಡೆಯಲು ಉದ್ದೇಶಿಸಲಾಗಿದೆ. ಮಧ್ಯಂತರ ವರದಿಯಲ್ಲಿ ಏನಿದೆ ಎಂಬುದು ಸದನದಲ್ಲೇ ಬಹಿರಂಗವಾಗಲಿದೆ. ವರದಿ ಈಗ ಸದನದ ಸ್ವತ್ತು’ ಎಂದು ಮರಿತಿಬ್ಬೇಗೌಡ ಹೇಳಿದರು.</p>.<p>‘ಮರಿತಿಬ್ಬೇಗೌಡ, ಬಿ.ಕೆ.ಹರಿಪ್ರಸಾದ್ ಅವರು ಗಲಾಟೆಯಲ್ಲಿ ಪಾಲ್ಗೊಂಡಿದ್ದರಿಂದ ಅವರನ್ನು ಸಮಿತಿಗೆ ಸೇರಿಸಿದ್ದು ಸರಿಯಲ್ಲ. ಸಮಿತಿಯಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ’ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದರು.</p>.<p class="Briefhead"><strong>‘ರಾಜೀನಾಮೆ ಬಗ್ಗೆ ಕಾದು ನೋಡಿ’</strong><br />‘ನನ್ನ ರಾಜೀನಾಮೆಯ ಬಗ್ಗೆ ಈಗಲೇ ಏನು ಹೇಳಲಾಗದು, ಕಾದು ನೋಡಿ. ಆದರೆ, ಉಪಸಭಾಪತಿ ಸ್ಥಾನವೇ ಖಾಲಿ ಇರುವಾಗ ಯಾರಿಗೆ ರಾಜೀನಾಮೆ ಕೊಡಬೇಕು’ ಎಂದು ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಪ್ರಶ್ನಿಸಿದರು.</p>.<p>ಸದನ ಸಮಿತಿಯಿಂದ ಮಧ್ಯಂತರ ವರದಿ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ಡಿ.15 ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ರಚಿಸಿರುವ ಸದನ ಸಮಿತಿ ಶಾಸನ ಬದ್ಧವಾಗಿದ್ದು, ಸಮಿತಿಯ ವರದಿಯೂ ಶಾಸನ ಬದ್ಧ ಎಂದು ಅವರು ಪ್ರತಾಪಚಂದ್ರ ಶೆಟ್ಟಿ ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>