ಚಿಕ್ಕಬಳ್ಳಾಪುರ: ‘ಸದಾಶಿವ ಆಯೋಗದ ವರದಿ ಇನ್ನೂ ಜಾರಿಯಾಗಿಲ್ಲ. ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುತ್ತವೆ. ಈ ಸಮುದಾಯಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಈ ಸಮುದಾಯಗಳನ್ನು ಎಸ್ಸಿ ಪಟ್ಟಿಯಲ್ಲಿ ಉಳಿಸಿಕೊಂಡೇ ಕೇಂದ್ರಕ್ಕೆ ಶಿಫಾರಸು ಮಾಡ ಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು