<p class="Subhead"><strong>ಚಿಕ್ಕಬಳ್ಳಾಪುರ:</strong> ‘ಸದಾಶಿವ ಆಯೋಗದ ವರದಿ ಇನ್ನೂ ಜಾರಿಯಾಗಿಲ್ಲ. ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುತ್ತವೆ. ಈ ಸಮುದಾಯಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಈ ಸಮುದಾಯಗಳನ್ನು ಎಸ್ಸಿ ಪಟ್ಟಿಯಲ್ಲಿ ಉಳಿಸಿಕೊಂಡೇ ಕೇಂದ್ರಕ್ಕೆ ಶಿಫಾರಸು ಮಾಡ ಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು</p>.<p>‘ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ನೀಡುತ್ತಿರುವುದನ್ನು ಕಾಂಗ್ರೆಸ್ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಿಂಸೆಗೆ ಪ್ರಚೋದಿಸುತ್ತಿದ್ದಾರೆ.ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ’ ಎಂದು ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಂಜಾರ ಸಮುದಾಯವು ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗ ಬಾರದು. ಯಾವುದೇ ವಿಷಯ ಇದ್ದರೂ ಕುಳಿತು ಪರಿಹರಿಸಿಕೊಳ್ಳೋಣ. ಹಿಂಸೆಗೆ ಅವಕಾಶ ಬೇಡ’ ಎಂದು ಮನವಿ ಮಾಡಿದರು. </p>.<p>‘ಪರಿಶಿಷ್ಟ ಜಾತಿಗೆ ಶೇ 3ರಷ್ಟು ಬದಲು ಶೇ 4.5 ಮೀಸಲಾತಿ ಕೊಟ್ಟಿದ್ದೇವೆ. ತಾಂಡಾದ ಜನರಿಗೆ 2 ಲಕ್ಷ ಹಕ್ಕುಪತ್ರ ನೀಡಿದ್ದೇವೆ. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ತಾಂಡಾಗಳಿಗೆ ಮೂಲ ಸೌಲಭ್ಯಗಳನ್ನು ಕೊಟ್ಟಿದ್ದು ಬಿ.ಎಸ್.ಯಡಿಯೂರಪ್ಪ. ಮೊದಲಿನಿಂದಲೂ ಬಿಜೆಪಿ ಬಂಜಾರ ಸಮುದಾಯದ ರಕ್ಷಣೆ ಮಾಡಿದೆ. ಮುಂದೆಯೂ ಮಾಡುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Subhead"><strong>ಚಿಕ್ಕಬಳ್ಳಾಪುರ:</strong> ‘ಸದಾಶಿವ ಆಯೋಗದ ವರದಿ ಇನ್ನೂ ಜಾರಿಯಾಗಿಲ್ಲ. ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುತ್ತವೆ. ಈ ಸಮುದಾಯಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಈ ಸಮುದಾಯಗಳನ್ನು ಎಸ್ಸಿ ಪಟ್ಟಿಯಲ್ಲಿ ಉಳಿಸಿಕೊಂಡೇ ಕೇಂದ್ರಕ್ಕೆ ಶಿಫಾರಸು ಮಾಡ ಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು</p>.<p>‘ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ನೀಡುತ್ತಿರುವುದನ್ನು ಕಾಂಗ್ರೆಸ್ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಿಂಸೆಗೆ ಪ್ರಚೋದಿಸುತ್ತಿದ್ದಾರೆ.ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ’ ಎಂದು ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಂಜಾರ ಸಮುದಾಯವು ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗ ಬಾರದು. ಯಾವುದೇ ವಿಷಯ ಇದ್ದರೂ ಕುಳಿತು ಪರಿಹರಿಸಿಕೊಳ್ಳೋಣ. ಹಿಂಸೆಗೆ ಅವಕಾಶ ಬೇಡ’ ಎಂದು ಮನವಿ ಮಾಡಿದರು. </p>.<p>‘ಪರಿಶಿಷ್ಟ ಜಾತಿಗೆ ಶೇ 3ರಷ್ಟು ಬದಲು ಶೇ 4.5 ಮೀಸಲಾತಿ ಕೊಟ್ಟಿದ್ದೇವೆ. ತಾಂಡಾದ ಜನರಿಗೆ 2 ಲಕ್ಷ ಹಕ್ಕುಪತ್ರ ನೀಡಿದ್ದೇವೆ. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ತಾಂಡಾಗಳಿಗೆ ಮೂಲ ಸೌಲಭ್ಯಗಳನ್ನು ಕೊಟ್ಟಿದ್ದು ಬಿ.ಎಸ್.ಯಡಿಯೂರಪ್ಪ. ಮೊದಲಿನಿಂದಲೂ ಬಿಜೆಪಿ ಬಂಜಾರ ಸಮುದಾಯದ ರಕ್ಷಣೆ ಮಾಡಿದೆ. ಮುಂದೆಯೂ ಮಾಡುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>