ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಫಾಯಿ ಕರ್ಮಚಾರಿ ಪುನರ್‌ ಸಮೀಕ್ಷೆ ಶೀಘ್ರ’

ಪ್ರಾಯೋಗಿಕವಾಗಿ ಬಳ್ಳಾರಿ, ಮೈಸೂರಿನಲ್ಲಿ ಆರಂಭ
Last Updated 8 ಜನವರಿ 2021, 20:36 IST
ಅಕ್ಷರ ಗಾತ್ರ

ಬಳ್ಳಾರಿ: ‘ಸಫಾಯಿ ಕರ್ಮಚಾರಿಗಳ ಪುನರ್‌ಸಮೀಕ್ಷೆಯನ್ನು ಬಳ್ಳಾರಿ ಮತ್ತು ಮೈಸೂರಿನಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುವುದು’ ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್‌.ಹನುಮಂತಪ್ಪ ತಿಳಿಸಿದರು.

‘ಹಿಂದೆ ನಡೆದಿರುವ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ 1,42,291 ಮಂದಿ ಸಫಾಯಿ ಕರ್ಮಚಾರಿಗಳಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಿರಬಹುದು. ಸಮೀಕ್ಷೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರನ್ನಷ್ಟೇ ಪರಿಗಣಿಸಲಾಗಿತ್ತು’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಐದು ವರ್ಷದ ಹಿಂದೆ ರೂಪಿಸಲಾದ ನಿಗಮಕ್ಕೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಸಮರ್ಪಕ ಅನುದಾನ ನೀಡಿಲ್ಲ. ಹಿಂದಿನ ವರ್ಷ ನೀಡಿದ್ದ ₹ 66 ಕೋಟಿ ಅನುದಾನ ಕೋವಿಡ್‌ ಬಿಕ್ಕಟ್ಟಿನಿಂದಾಗಿ ಖರ್ಚಾಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT