ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಹರತಾಳು ಹಾಲಪ್ಪ, ‘ಅರಣ್ಯ ಇಲಾಖೆಯ ಅಧಿಕಾರಿಗಳು ಕೊಳವೆ ಮಾರ್ಗ ಅಳವಡಿಸಲು ಅನುಮತಿ ಕೊಡುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಪೂರೈಸಲು ಆಗುತ್ತಿಲ್ಲ’ ಎಂದರು. ತೀವ್ರ ಸಮಸ್ಯೆ ಇರುವ ಪ್ರದೇಶಗಳಿಗೆ ನೀರು ಪೂರೈಕೆಗೆ ಕೊಳವೆ ಮಾರ್ಗ ಅಳವಡಿಸಲು ಅನುಮತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಏಕಾಏಕಿ ಆದೇಶ ನೀಡುವುದು ಕಷ್ಟ ಎಂದು ಹೇಳಿದರು.