ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಆರ್.ಕಮಲಗೆ ಸಾಹಿತ್ಯ ಕಲ್ಪತರು ಪ್ರಶಸ್ತಿ

Last Updated 10 ನವೆಂಬರ್ 2022, 19:33 IST
ಅಕ್ಷರ ಗಾತ್ರ

ತಿಪಟೂರು: ತಿಪಟೂರಿನ ‘ಬಯಲುಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ’ ನೀಡುವ ‘ಸಾಹಿತ್ಯ ಕಲ್ಪತರು’ ರಾಜ್ಯಮಟ್ಟದ ಪ್ರಶಸ್ತಿಗೆ ಕವಯತ್ರಿ, ಅನುವಾದಕಿ, ಪ್ರಕಾಶಕಿ ಪ್ರೊ. ಎಂ.ಆರ್. ಕಮಲ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣ ಫಲಕ ಒಳಗೊಂಡಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಬಾನುಪ್ರಶಾಂತ್ ತಿಳಿಸಿದ್ದಾರೆ.

ಸಾಹಿತ್ಯ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕಮಲ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದು ಸಂಘ ನೀಡುತ್ತಿರುವ ಮೂರನೇ ಪ್ರಶಸ್ತಿಯಾಗಿದ್ದು, ಈ ಹಿಂದೆ ಬಾರಿ ಕವಿ ಡುಂಡಿರಾಜ್ ಮತ್ತು ಬಿ.ಆರ್. ಲಕ್ಷ್ಮಣರಾವ್ ಅವರಿಗೆ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಪ್ರಧಾನ ಸಮಾರಂಭವು ನ. 18 ರಂದು ಸಂಜೆ 6ಕ್ಕೆ ನಗರದ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ಜರುಗಲಿದೆ. ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಬೆಂಗಳೂರು ದೂರದರ್ಶನ ಕೆಂದ್ರದ ಮಾಜಿ ನಿರ್ದೇಶಕ ಜಿ.ಎಂ. ಶಿರಹಟ್ಟಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT