ಕರ್ತವ್ಯಕ್ಕೆ ಗೈರಾದರೆ ವೇತನ ಕಡಿತ:ಮುಷ್ಕರಕ್ಕೆ ಸಾರಿಗೆ ನೌಕರರು ಪಟ್ಟುಹಿಡಿರುವ ಬೆನ್ನಲೇ ಕರ್ತವ್ಯಕ್ಕೆ ಗೈರಾಗುವವರ ವೇತನ ಕಡಿತಗೊಳಿಸಿ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಕೆಎಸ್ಆರ್ಟಿಸಿ ನೀಡಿದೆ. ‘ಏಪ್ರಿಲ್ 7ರಿಂದ ಬಸ್ಗಳ ಕಾರ್ಯಾಚರಣೆ ಸಾಮಾನ್ಯ ಸ್ಥಿತಿಗೆ ಬರುವ ತನಕ ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ ಎಂಬ ತತ್ವದ ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶದಲ್ಲಿ ಹೇಳಿದ್ದಾರೆ.