<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವುದರಿಂದ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯದಲ್ಲಿನ ವಿದ್ಯುತ್ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆಗೆ ಕುರಿತಂತೆ ಅವರು ಬುಧವಾರ ಸಭೆ ನಡೆಸಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ 30,562.56 ಮೆಗಾ ವ್ಯಾಟ್ನಷ್ಟಿದೆ. ಶೇ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಸದ್ಯ ವಿದ್ಯುತ್ ಕೊರತೆ ಇರುವುದಿಲ್ಲ. ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿವುವದರಿಂದ ವಿದ್ಯುತ್ ಕೊರತೆ ಆಗದು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲದಲ್ಲಿ ವಿದ್ಯುತ್ ಸೋರಿಕೆ ಪ್ರಮಾಣ ಅತಿ ಕಡಿಮೆ ಸುಮಾರು ಶೇ 3ರಷ್ಟು ಮಾತ್ರ ಇದೆ. ಆ ಮೂಲಕ, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ’ ಎಂದು ಅಧಿಕಾರಿಗಳು ತಿಳಿಸಿದಾಗ, ‘ವಿತರಣಾ ಜಾಲದಲ್ಲಿಯೂ ವಿದ್ಯುತ್ ಸೋರಿಕೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸೂಚಿಸಿದರು.</p>.<p>‘ನೀರಾವರಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಅನುವಾಗುವಂತೆ ಸ್ಟೇಷನ್ಗಳು ಹಾಗೂ ಫೀಡರ್ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಕೆಲಸ 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳಲಿದೆ. ಪ್ರಸ್ತುತ 26 ಸ್ಟೇಷನ್ಗಳು ಹಾಗೂ 182 ಫೀಡರ್ಗಳ ಕಾಮಗಾರಿ ಪೂರ್ಣಗೊಂಡಿದೆ’ ಎಂದೂ ಅಧಿಕಾರಿಗಳು ತಿಳಿಸಿದರು.</p>.<p>‘ರಾಜ್ಯದ ಒಟ್ಟಾರೆ ವಿದ್ಯುತ್ ಬಳಕೆಯ ಶೇ 18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವಲ್ಲಿ ತಲೆದೋರುವ ತೊಡಕು ನಿವಾರಿಸಲು ಕೈಗಾರಿಕಾ ಇಲಾಖೆ ಹಾಗೂ ಇಂಧನ ಇಲಾಖೆ ಅಧಿಕಾರಿಗಳು ಕಾಲ-ಕಾಲಕ್ಕೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.</p>.<p>ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವುದರಿಂದ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯದಲ್ಲಿನ ವಿದ್ಯುತ್ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆಗೆ ಕುರಿತಂತೆ ಅವರು ಬುಧವಾರ ಸಭೆ ನಡೆಸಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ 30,562.56 ಮೆಗಾ ವ್ಯಾಟ್ನಷ್ಟಿದೆ. ಶೇ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಸದ್ಯ ವಿದ್ಯುತ್ ಕೊರತೆ ಇರುವುದಿಲ್ಲ. ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿವುವದರಿಂದ ವಿದ್ಯುತ್ ಕೊರತೆ ಆಗದು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲದಲ್ಲಿ ವಿದ್ಯುತ್ ಸೋರಿಕೆ ಪ್ರಮಾಣ ಅತಿ ಕಡಿಮೆ ಸುಮಾರು ಶೇ 3ರಷ್ಟು ಮಾತ್ರ ಇದೆ. ಆ ಮೂಲಕ, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ’ ಎಂದು ಅಧಿಕಾರಿಗಳು ತಿಳಿಸಿದಾಗ, ‘ವಿತರಣಾ ಜಾಲದಲ್ಲಿಯೂ ವಿದ್ಯುತ್ ಸೋರಿಕೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸೂಚಿಸಿದರು.</p>.<p>‘ನೀರಾವರಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಅನುವಾಗುವಂತೆ ಸ್ಟೇಷನ್ಗಳು ಹಾಗೂ ಫೀಡರ್ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಕೆಲಸ 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳಲಿದೆ. ಪ್ರಸ್ತುತ 26 ಸ್ಟೇಷನ್ಗಳು ಹಾಗೂ 182 ಫೀಡರ್ಗಳ ಕಾಮಗಾರಿ ಪೂರ್ಣಗೊಂಡಿದೆ’ ಎಂದೂ ಅಧಿಕಾರಿಗಳು ತಿಳಿಸಿದರು.</p>.<p>‘ರಾಜ್ಯದ ಒಟ್ಟಾರೆ ವಿದ್ಯುತ್ ಬಳಕೆಯ ಶೇ 18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವಲ್ಲಿ ತಲೆದೋರುವ ತೊಡಕು ನಿವಾರಿಸಲು ಕೈಗಾರಿಕಾ ಇಲಾಖೆ ಹಾಗೂ ಇಂಧನ ಇಲಾಖೆ ಅಧಿಕಾರಿಗಳು ಕಾಲ-ಕಾಲಕ್ಕೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.</p>.<p>ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>