ವಿಧಾನ ಪರಿಷತ್ನಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಟಿಪ್ಪು ಸುಲ್ತಾನ್ ದೂರದೃಷ್ಟಿಯ, ಸರ್ವಧರ್ಮ ಸಹಿಷ್ಣು, ವೈಜ್ಞಾನಿಕ ಮನೋಭಾವದ ಪ್ರಗತಿಪರ ಆಡಳಿತಗಾರರಾಗಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರೊಂದಿಗೆ ಹೋರಾಡುತ್ತಲೇ ರಣಾಂಗಣ ದಲ್ಲಿ ಮಡಿದ ಮೊದಲ ರಾಜ. ಮೈಸೂರು ಹುಲಿ ಎಂದು ಖ್ಯಾತಿ ಪಡೆದಿದ್ದ ಅವರ ಇತಿಹಾಸವನ್ನು ಸಂಪೂರ್ಣವಾಗಿ ಮಕ್ಕಳಿಗೆ ತಿಳಿಸು ವುದು ಸರ್ಕಾರದ ಕರ್ತವ್ಯ’ ಎಂದರು.