ಈ ಕುರಿತು ಶನಿವಾರ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಮತ್ತು ಎಚ್.ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಬಿನ್ ಮಾಥ್ಯುಸ್, 'ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ರಾಜ್ಯ ಘಟಕವು ಜೆಡಿಎಸ್ ಅನ್ನು ಬೇಷರತ್ ಬೆಂಬಲಿಸುತ್ತಿದೆ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಆಭ್ಯರ್ಥಿಗಳ ಗೆಲುವಿಗೆ ಎಸ್ಪಿ ಶ್ರಮಿಸಲಿದೆ,’ ಎಂದು ತಿಳಿಸಿದ್ದಾರೆ.