ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲ ಘೋಷಿಸಿದ ಸಮಾಜವಾದಿ ಪಕ್ಷ

Last Updated 24 ಅಕ್ಟೋಬರ್ 2020, 6:56 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಪ್ರದೇಶದ ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆನಡೆಯುತ್ತಿರುವ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅನ್ನು ಬೆಂಬಲಿಸಿದೆ.

ಈ ಕುರಿತು ಶನಿವಾರ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಮತ್ತು ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಬಿನ್‌ ಮಾಥ್ಯುಸ್‌, 'ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ರಾಜ್ಯ ಘಟಕವು ಜೆಡಿಎಸ್‌ ಅನ್ನು ಬೇಷರತ್‌ ಬೆಂಬಲಿಸುತ್ತಿದೆ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಆಭ್ಯರ್ಥಿಗಳ ಗೆಲುವಿಗೆ ಎಸ್‌ಪಿ ಶ್ರಮಿಸಲಿದೆ,’ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಟ್ವೀಟ್‌ ಮಾಡಿರುವ ಜೆಡಿಎಸ್‌ ರಾಜ್ಯ ಘಟಕ, 'ಸಮಾಜವಾದಿ ಪಕ್ಷವು ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದೆ. ಸಮಾಜವಾದಿ ಪಕ್ಷದ ಬೆಂಬಲಕ್ಕೆ ನಮ್ಮ ಕೃತಜ್ಞತೆಗಳು,’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT