ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ನೆಹರೂ ಸಂತಾನ ದೇಶವನ್ನು ನಾಶ ಮಾಡಿದರೆ, ಆರ್ಎಸ್ಎಸ್ ದೇಶವನ್ನು ಉದ್ಧಾರ ಮಾಡಿದೆ. ಅಧಿಕಾರ ಕಳೆದುಕೊಂಡ ಮೇಲೆ ಸಿದ್ದರಾಮಯ್ಯಗೆ ಮತಿಭ್ರಮಣೆ
ಆಗಿದೆ. ಅಧಿಕಾರದ ಹುಚ್ಚಿನಲ್ಲಿ ಇತಿಹಾಸ, ಭಾರತೀಯತೆ ಎಲ್ಲವನ್ನೂ ಮರೆತಿದ್ದಾರೆ. ಸಮಾಜವಾದದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ, ಬಳಿಕ ಮಜಾವಾದಿಯಾಗಿ ಪರಿವರ್ತನೆಯಾಗಿದ್ದಾರೆ. ಸಮಾಜವನ್ನು ಒಡೆಯುವ, ಜಾತಿ ಸಂಘರ್ಷ, ಗಲಭೆ ಸೃಷ್ಟಿಸುವ ಮನಸ್ಸುಗಳೊಂದಿಗೆ ಕೈಜೋಡಿಸುತ್ತಿದ್ದಾರೆ’ ಎಂದು ಆರೋಪಿಸಿದರು.