ಹೊಸಪೇಟೆ/ಸಂಡೂರು: ಸಂಡೂರು ಉಪ ವಲಯ ಅರಣ್ಯ ಅಧಿಕಾರಿ ಬಸವರಾಜ ವೀರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಂಗಾವತಿ ತಾಲ್ಲೂಕಿನ ಜಮಾಪುರ ಗ್ರಾಮದ ಬಸವರಾಜ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.
'ಭಾನುವಾರ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ. ಸೋಮವಾರ ಘಟನೆಗೆ ಬಗ್ಗೆ ಗೊತ್ತಾಗಿದೆ. ಆತ್ಮಹತ್ಯೆಗೆ ಇನ್ನಷ್ಟೇ ಕಾರಣ ತಿಳಿಯಬೇಕಿದೆ' ಎಂದು ಪೊಲೀಸರು ತಿಳಿಸಿದ್ದಾರೆ.