ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಂಗಾರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ಹಿಂದೆ ಹೊಸ ಪಕ್ಷಗಳನ್ನು ಕಟ್ಟಿದಾಗ ಯಶಸ್ಸು ಕಂಡಿದ್ದು ಕಡಿಮೆ. ಎಲ್ಲರಿಗೂ ಅವರದ್ದೇ ಆದ ಧ್ಯೇಯ ಹಾಗೂ ಧೋರಣೆಗಳು ಇರುತ್ತವೆ. ರೆಡ್ಡಿ ಅವರಿಗೆ ತಮ್ಮ ಯೋಜನೆಗಳ ಬಗ್ಗೆ ಗಟ್ಟಿ ನಂಬಿಕೆ ಇರಬಹುದು. ಮುಂಬರುವ ಚುನಾವಣೆಯಲ್ಲಿ ರೆಡ್ಡಿ ಸ್ಥಾಪಿಸಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಪರಿಣಾಮ ಬೀರುತ್ತದೆ ಎನ್ನುವುದು ಈಗಲೇ ಹೇಳುವುದು ಕಷ್ಟ’ ಎಂದು ಅಭಿಪ್ರಾಯಪಟ್ಟರು.