ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಲ್ಲಿ ಕನ್ನಡ–ಮರಾಠಿ ಭಾಷಿಕರು ಎಂದೇನಿಲ್ಲ. ಯಾರೇ ತಪ್ಪು ಮಾಡಿದ್ದಾರೊ ಅವರ ವಿರುದ್ಧ ಕ್ರಮವಾಗುತ್ತದೆ. ಪೀರನವಾಡಿಯಲ್ಲಿ ಗುರುವಾರ ಹಾಗೂ ಶುಕ್ರವಾರ ರಾಯಣ್ಣ ಪ್ರತಿಮೆ ಸಂಬಂಧ ಕೆಲವು ಬೆಳವಣಿಗೆಗಳಾಗಿವೆ. ಶುಕ್ರವಾರ ಬೆಳಿಗ್ಗೆ ಕಾನೂನು ಮತ್ತು ಸುವ್ಯವಸ್ಥೆಗೆ ಸ್ವಲ್ಪ ತೊಂದರೆ ಆಗಿತ್ತು. ನಗರ ಪೊಲೀಸರು ಭೇಟಿ ನೀಡಿ ಸರಿಪಡಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ತಿಳಿಸಿದರು.