ಸಂಸ್ಕೃತ ಅಧ್ಯಾಪಕರಾಗಿದ್ದ ಅವರಿಗೆ 2019ರಲ್ಲಿ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ 'ಮಹಾಮಹೋಪಾಧ್ಯಾಯ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿತ್ತು. ಚಂಪೂಕಾವ್ಯ ಸೇರಿದಂತೆ ಹಲವು ಸಂಸ್ಕೃತ ಗ್ರಂಥಗಳನ್ನು ಅವರು ರಚಿಸಿದ್ದರು. ರಾಜ್ಯದ ಹಲವು ಸಂಸ್ಥೆಗಳಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿ ಹೆಸರು ಮಾಡಿದ್ದರು. 1995ರಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೂ ಭಾಜನರಾಗಿದ್ದರು.