ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್‌ ಪಾಟೀಲ ಆತ್ಮಹತ್ಯೆ: ಕಾಂಗ್ರೆಸ್, ಬಿಜೆಪಿ ನಾಯಕರ ಕೈವಾಡ- ಯತ್ನಾಳ್ ಆರೋಪ

Last Updated 15 ಏಪ್ರಿಲ್ 2022, 20:55 IST
ಅಕ್ಷರ ಗಾತ್ರ

ವಿಜಯಪುರ: ‘ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆಯ ಹಿಂದೆ ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರ ಕೈವಾಡವೂ ಇದೆ’ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಹಾಗೂ ಬಿಜೆಪಿಯ ತಲಾ ಒಬ್ಬರು ನಾಯಕರು ಇಂಥ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ಸಿಡಿ ಮಾಡುವುದು, ಎಡಿಟ್ ಮಾಡುವುದೇ ಇವರ ಕಾಯಕ. ಈ ನಾಯಕರು ಮಹಾನ್ ಕಳ್ಳರು’ ಎಂದರು.

‘ಸಂತೋಷ್‌ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಬಿಜೆಪಿ ಮುಖಂಡರೊಬ್ಬರ ಕೈವಾಡವೂ ಇದೆ. ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗಿದೆ’ ಎಂದು ದೂರಿದರು. ‘ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ ಹಾಗೆ, ಸಿಡಿ ಹಗರಣ, ಗುತ್ತಿಗೆದಾರ ಆತ್ಮಹತ್ಯೆ ಹಿಂದೆ ಮಹಾ ನಾಯಕರೊಬ್ಬರಕೈವಾಡವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT