<p><strong>ಬೆಂಗಳೂರು:</strong>‘ನನ್ನ ಪತಿ ನಿನ್ನೆ ಬೆಳಗ್ಗಿನಿಂದಲೇ ಬಹಳ ಬೇಸರದಿಂದ ಇದ್ದರು’ ಎಂದು ಎನ್.ಆರ್.ಸಂತೋಷ್ ಅವರ ಪತ್ನಿ ಜಾಹ್ನವಿ ಹೇಳಿದ್ದಾರೆ.</p>.<p>ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಿನ್ನೆ ಸಂಜೆ ಹೊರಗೆ ಹೋಗಿದ್ದರು. ರಾತ್ರಿ 7 ಗಂಟೆಗೆ ಮನೆಗೆ ಬಂದು ಓದಲು ಹೋಗುತ್ತೇನೆ ಎಂದು ಮಹಡಿಗೆ ಹೋದರು. ಅಡುಗೆ ಏನು ಮಾಡಲಿ ಎಂದು ಕೇಳಲು ಹೋದಾಗಲೂ ಅವರು ಬೇಜಾರದಲ್ಲಿದ್ದರು. ಏನೂ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/what-are-the-reasons-of-sucide-attempt-by-santosh-782713.html" itemprop="url">ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣಗಳೇನು?</a></p>.<p>‘ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞೆ ಕಳೆದುಕೊಂಡರು. ತಕ್ಷಣವೇ ರಾಮಯ್ಯ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದೆವು. ರಾಜಕೀಯದಲ್ಲಿ ಆಗಿರುವ ಏರುಪೇರಿನಿಂದ ಬೇಜಾರಾಗಿದ್ದರು. ಕೌಟುಂಬಿಕವಾಗಿ ನಾವು ಚೆನ್ನಾಗಿಯೇ ಇದ್ದೇವೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ’ ಎಂದು ಜಾಹ್ನವಿ ಹೇಳಿದರು.</p>.<p>‘ನಿದ್ದೆ ಮಾತ್ರೆ ಸೇವಿಸಿದ್ದರಿಂದ ಪ್ರಜ್ಞೆ ತಪ್ಪಿದೆ. ಸರಿ ಹೋಗುತ್ತೆ, ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ನನ್ನ ಪತಿ ನಿನ್ನೆ ಬೆಳಗ್ಗಿನಿಂದಲೇ ಬಹಳ ಬೇಸರದಿಂದ ಇದ್ದರು’ ಎಂದು ಎನ್.ಆರ್.ಸಂತೋಷ್ ಅವರ ಪತ್ನಿ ಜಾಹ್ನವಿ ಹೇಳಿದ್ದಾರೆ.</p>.<p>ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಿನ್ನೆ ಸಂಜೆ ಹೊರಗೆ ಹೋಗಿದ್ದರು. ರಾತ್ರಿ 7 ಗಂಟೆಗೆ ಮನೆಗೆ ಬಂದು ಓದಲು ಹೋಗುತ್ತೇನೆ ಎಂದು ಮಹಡಿಗೆ ಹೋದರು. ಅಡುಗೆ ಏನು ಮಾಡಲಿ ಎಂದು ಕೇಳಲು ಹೋದಾಗಲೂ ಅವರು ಬೇಜಾರದಲ್ಲಿದ್ದರು. ಏನೂ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/what-are-the-reasons-of-sucide-attempt-by-santosh-782713.html" itemprop="url">ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣಗಳೇನು?</a></p>.<p>‘ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞೆ ಕಳೆದುಕೊಂಡರು. ತಕ್ಷಣವೇ ರಾಮಯ್ಯ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದೆವು. ರಾಜಕೀಯದಲ್ಲಿ ಆಗಿರುವ ಏರುಪೇರಿನಿಂದ ಬೇಜಾರಾಗಿದ್ದರು. ಕೌಟುಂಬಿಕವಾಗಿ ನಾವು ಚೆನ್ನಾಗಿಯೇ ಇದ್ದೇವೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ’ ಎಂದು ಜಾಹ್ನವಿ ಹೇಳಿದರು.</p>.<p>‘ನಿದ್ದೆ ಮಾತ್ರೆ ಸೇವಿಸಿದ್ದರಿಂದ ಪ್ರಜ್ಞೆ ತಪ್ಪಿದೆ. ಸರಿ ಹೋಗುತ್ತೆ, ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>