ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆಬ್ರುವರಿ 17 ಮತ್ತು 25ರಂದು ಸರಳ ಸಾಮೂಹಿಕ ವಿವಾಹ ನಡೆಸಲಾಗುವುದು. ಯಾವುದಾದರೂ ಜಿಲ್ಲೆಯಲ್ಲಿ ಅವರವರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ‘ಸಪ್ತಪದಿ’ ಮಾಡುವುದಾಗಿ ಆಯಾ ಜಿಲ್ಲೆಯ ದೇಗುಲದವರು ಮುಂದೆ ಬಂದರೆ, ಅವರು ಹೇಳಿದ ದಿನಾಂಕದಂದು ಮದುವೆ ನಡೆಸಲು ಅವಕಾಶ ಮಾಡಿಕೊಡಲಾಗುವುದು. ಸರಳ ವಿವಾಹಕ್ಕೆ ಹೆಚ್ಚಿನ ಮಹತ್ವ ಕೊಡಬೇಕು’ ಎಂದರು.