<p><strong>ಬೆಂಗಳೂರು:</strong> ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ನಟರಾಜನ್, ನಗರದ ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆ ಆಗಲಿದ್ದು, ಆಸ್ಪತ್ರೆ ಸುತ್ತ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.</p>.<p>ಶಶಿಕಲಾ ಬರಮಾಡಿಕೊಳ್ಳಲು ತಮಿಳುನಾಡಿನಿಂದ 5000ಕ್ಕೂ ಹೆಚ್ಚು ಜನರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.</p>.<p>ಜೈಲು ಶಿಕ್ಷೆ ಘೋಷಣೆಯಾದ ದಿನದಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಶಿಕಲಾ ಕರೆತರುವ ವೇಳೆ ಗಲಾಟೆ ಉಂಟಾಗಿತ್ತು. ಕೆಲ ವಾಹನಗಳಿಗೂ ಹಾನಿ ಆಗಿತ್ತು. ಅದೇ ಕಾರಣಕ್ಕೆ ಇದೀಗ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.</p>.<p>ಸಂಬಂಧಿಕರು ಹಾಗೂ ಆತ್ಮೀಯರನ್ನು ಹೊರತುಪಡಿಸಿ ಉಳಿದ ಜನರನ್ನು ಆಸ್ಪತ್ರೆ ಬಳಿ ಕರೆಸದಂತೆ ಶಶಿಕಲಾ ಹಾಗೂ ಇತರರಿಗೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.</p>.<p>‘ಜೈಲಿನಿಂದ ಬಿಡುಗಡೆ ಆಗಿರುವ ಶಶಿಕಲಾ, ಇದೀಗ ಕೋವಿಡ್ಗೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆಸ್ಪತ್ರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಭಾನುವಾರ ಬೆಳಿಗ್ಗೆ ಅಥವಾ ಮಧ್ಯಾಹ್ನ ಶಶಿಕಲಾ ಬಿಡುಗಡೆ ಆಗುವ ಸಾಧ್ಯತೆ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಆಸ್ಪತ್ರೆಯಿಂದ ಹೊರಬಂದ ಕೂಡಲೇ ತಮ್ಮದೇ ವಾಹನದಲ್ಲಿ ಶಶಿಕಲಾ ತೆರಳಲಿದ್ದಾರೆ. ಸ್ಥಳದಲ್ಲಿ ಮೆರವಣಿಗೆ ಹಾಗೂ ಸಂಭ್ರಮ ಆಚರಣೆಗೆ ಯಾವುದೇ ಅನುಮತಿ ನೀಡಿಲ್ಲ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ನಟರಾಜನ್, ನಗರದ ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆ ಆಗಲಿದ್ದು, ಆಸ್ಪತ್ರೆ ಸುತ್ತ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.</p>.<p>ಶಶಿಕಲಾ ಬರಮಾಡಿಕೊಳ್ಳಲು ತಮಿಳುನಾಡಿನಿಂದ 5000ಕ್ಕೂ ಹೆಚ್ಚು ಜನರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.</p>.<p>ಜೈಲು ಶಿಕ್ಷೆ ಘೋಷಣೆಯಾದ ದಿನದಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಶಿಕಲಾ ಕರೆತರುವ ವೇಳೆ ಗಲಾಟೆ ಉಂಟಾಗಿತ್ತು. ಕೆಲ ವಾಹನಗಳಿಗೂ ಹಾನಿ ಆಗಿತ್ತು. ಅದೇ ಕಾರಣಕ್ಕೆ ಇದೀಗ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.</p>.<p>ಸಂಬಂಧಿಕರು ಹಾಗೂ ಆತ್ಮೀಯರನ್ನು ಹೊರತುಪಡಿಸಿ ಉಳಿದ ಜನರನ್ನು ಆಸ್ಪತ್ರೆ ಬಳಿ ಕರೆಸದಂತೆ ಶಶಿಕಲಾ ಹಾಗೂ ಇತರರಿಗೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.</p>.<p>‘ಜೈಲಿನಿಂದ ಬಿಡುಗಡೆ ಆಗಿರುವ ಶಶಿಕಲಾ, ಇದೀಗ ಕೋವಿಡ್ಗೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆಸ್ಪತ್ರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಭಾನುವಾರ ಬೆಳಿಗ್ಗೆ ಅಥವಾ ಮಧ್ಯಾಹ್ನ ಶಶಿಕಲಾ ಬಿಡುಗಡೆ ಆಗುವ ಸಾಧ್ಯತೆ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಆಸ್ಪತ್ರೆಯಿಂದ ಹೊರಬಂದ ಕೂಡಲೇ ತಮ್ಮದೇ ವಾಹನದಲ್ಲಿ ಶಶಿಕಲಾ ತೆರಳಲಿದ್ದಾರೆ. ಸ್ಥಳದಲ್ಲಿ ಮೆರವಣಿಗೆ ಹಾಗೂ ಸಂಭ್ರಮ ಆಚರಣೆಗೆ ಯಾವುದೇ ಅನುಮತಿ ನೀಡಿಲ್ಲ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>