‘ರೆಸಾರ್ಟ್ನಲ್ಲಿರುವ ಶಶಿಕಲಾ, ಸೋಮವಾರ ಬೆಳಿಗ್ಗೆ 7.30ಕ್ಕೆ ತಮಿಳುನಾಡಿನತ್ತ ಹೊರಡುವ ಸಾಧ್ಯತೆ ಇದೆ. ಈ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಎದುರು ಜಮಾಯಿಸುವ ಸಾಧ್ಯತೆ ಇದೆ. ಹೀಗಾಗಿ, ಕರ್ನಾಟಕ ಗಡಿಯವರೆಗೂ ಅವರಿಗೆ ಭದ್ರತೆ ನೀಡಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.