ಕುಕ್ಕರ್ ಬಾಂಬ್ ಸ್ಫೋಟಕ್ಕೆ ನಂಟು ಇರುವ ಅನುಮಾನ
ಮಂಗಳೂರು ಸ್ಫೋಟ ಪ್ರಕರಣ: ಸ್ಯಾಟಲೈಟ್ ಫೋನ್ಗಾಗಿ ಕಾಡಿನಲ್ಲಿ ಶೋಧ

ಉಜಿರೆ (ದಕ್ಷಿಣ ಕನ್ನಡ): ಬೆಳ್ತಂಗಡಿ ತಾಲ್ಲೂಕಿನ ಬೆಂದ್ರಾಳ ಪ್ರದೇಶದಲ್ಲಿ ಇದೇ 18ರಂದು ಸಂಜೆ 5 ಗಂಟೆಗೆ ನಿಷೇಧಿತ ಸ್ಯಾಟಲೈಟ್ ಫೋನ್ ಬಳಸಿ ಸಂವಹನ ನಡೆದಿದೆ ಎನ್ನಲಾಗಿದ್ದು, ಇದರ ಕುರಿತು ಹೆಚ್ಚಿನ ಕುರುಹುಗಳ ಪತ್ತೆಗಾಗಿ ಆಂತರಿಕ ಭದ್ರತಾ ಇಲಾಖೆ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಕಾಡಿನಲ್ಲಿ ಶೋಧ ನಡೆಸಿದ್ದಾರೆ.
ಸಂವಹನಕ್ಕೆ ಸ್ಯಾಟಲೈಟ್ ಫೋನ್ ಬಳಿಸಿದ ಸ್ಥಳವು ಬೆಂದ್ರಾಳದ ಕಾಡಿನಲ್ಲಿದೆ ಎಂದು ಆಂತರಿಕಭದ್ರತಾ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಆಂತರಿಕ ಭದ್ರತಾ ಇಲಾಖೆಯ ಎಸ್.ಐ ಚಿದಾನಂದ್ ನೇತೃತ್ವದ ತಂಡವು ಬೆಂದ್ರಾಳ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.